ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುಡ್ಡ ಕುಸಿತದಿಂದಾಗಿ ವಾಹನ ಸಂಚಾರ ಸ್ಥಗಿತವಾಗಿದ್ದ ಆಗುಂಬೆ ಘಾಟಿಯಲ್ಲಿ ಮಣ್ಣು ತೆರವು ಕಾರ್ಯಾಚರಣೆ ಪೂರ್ಣ ಗೊಂಡಿದ್ದು, ಇಂದಿನಿಂದ ಮತ್ತೆ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಭಾರೀ ಮಳೆಯ ಕಾರಣ ಎರಡು ದಿನಗಳ ಹಿಂದೆ ಇಲ್ಲಿ ಭೂಕುಸಿತವಾಗಿತ್ತು. ಜೊತೆಗೆ ಮರಗಳೂ ಉರುಳಿಬಿದ್ದಿದ್ದವು. ಇಂದಿನಿಂದ ಈ ದಾರಿಯಲ್ಲಿ ಲಘು ವಾಹನಗಳ ಸಂಚಾರಕ್ಕೆಅವಕಾಶ ನೀಡಲಾಗಿದೆ.