ಹೊಸದಿಗಂತ ಡಿಜಿಟಲ್ ಡೆಸ್ಕ್:
ಖ್ಯಾತ ಸಂಗೀತ ನಿರ್ದೇಶಕ ಹಾಗೂ ಸಂಗೀತ ಮಾಂತ್ರಿಕ ಇಳಯರಾಜ ಅವರಿಗೆ ಬಿಜೆಪಿ ಸಂಸದ ಸ್ಥಾನ ನೀಡಲಿದೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಇಳಯರಾಜಾ ಪ್ರಧಾನಿ ಮೋದಿಯವರನ್ನು ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಹೋಲಿಸಿ, ಹಾಡಿ ಹೊಗಳಿದರು.
ಅಂಬೇಡ್ಕರ್ & ಮೋದಿ-ರಿಫಾರ್ಮರ್ಸ್ ಐಡಿಯಾಸ್, ಪರ್ಫಾಮರ್ಸ್ ಇಂಪ್ಲಿಮೆಂಟೇಶನ್ (Ambedkar & Modi – Reformer’s Ideas, Performer’s Implementation) ಪುಸ್ತಕಕ್ಕೆ ಇಳಯರಾಜ ಮುನ್ನುಡಿ ಬರೆದಿದ್ದಾರೆ. ಈ ಸಂದರ್ಭದಲ್ಲಿ ಅಂಬೇಡ್ಕರ್ ಅವರ ಆಶಯಗಳನ್ನು ಮೋದಿ ಈಡೇರಿಸುತ್ತಿದ್ದಾರೆ ಎಂಬ ಮಾತನ್ನು ಹೇಳಿದ್ದಾರೆ.
ಸಂಗೀತ ಕ್ಷೇತ್ರದಿಂದ ಇಳಯರಾಜಾ ಅವರನ್ನು ನಾಮಕರಣ ಮಾಡಲು ಬಿಜೆಪಿ ಮುಂದಾಗಿದೆ ಎಂದು ತಿಳಿದು ಬಂದಿದೆ. ಸುಬ್ರಹ್ಮಣಿಯನ್ ಸ್ವಾಮಿ ಅವರ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ ಇಳಯರಾಜ ಅವರನ್ನು ರಾಜ್ಯಸಭೆಗೆ ಕಳುಹಿಸಲು ಮೋದಿ ಸರ್ಕಾರ ನಿರ್ಧರಿಸಿದ್ದು, ಶೀಘ್ರವೇ ರಾಷ್ಟ್ರಪತಿಗಳು ನೇಮಕ ಪ್ರಕಟಿಸಲಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರಚಾರ ನಡೆದಿದೆ.