February 20, 2026
Friday, February 20, 2026
spot_img

ಅಕ್ರಮ ಆಸ್ತಿ ಗಳಿಕೆ ಪ್ರಕರಣ: 10 ಸರ್ಕಾರಿ ಅಧಿಕಾರಿಗಳ ಮೇಲೆ ‘ಲೋಕಾ’ ದಾಳಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ 10 ಸರ್ಕಾರಿ ಅಧಿಕಾರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಮೂಲಗಳ ಪ್ರಕಾರ, ಆರೋಪಿ ಅಧಿಕಾರಿಗಳಿಗೆ ಸಂಬಂಧಿಸಿದ ರಾಜ್ಯದಾದ್ಯಂತ ವಿವಿಧ ಸ್ಥಳಗಳಲ್ಲಿ ಬೆಳಿಗ್ಗೆಯಿಂದಲೇ ಸಂಘಟಿತ ದಾಳಿಗಳು ಪ್ರಾರಂಭವಾಗಿವೆ.

ಮಂಡ್ಯ ನಗರ ಪುರಸಭೆ ಮುಖ್ಯ ಲೆಕ್ಕಾಧಿಕಾರಿ ಪುಟ್ಟಸ್ವಾಮಿ ಸಿ ಅವರ ಮೇಲೆ ದಾಳಿ ನಡೆಸಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ. ಪ್ರೇಮ್ ಸಿಂಗ್, ಮುಖ್ಯ ಅಭಿಯಂತರರು, ಕೃಷ್ಣಾ ಮೇಲ್ದಂಡೆ ಯೋಜನೆ, ಬೀದರ್; ರಾಮಸ್ವಾಮಿ ಸಿ, ಕಂದಾಯ ನಿರೀಕ್ಷಕರು, ಹೂಟಗಳ್ಳಿ ಪುರಸಭೆ, ಮೈಸೂರು; ಸುಭಾಷ್ ಚಂದ್ರ, ಸಹಾಯಕ ಪ್ರಾಧ್ಯಾಪಕರು, ಸಮಾಜಶಾಸ್ತ್ರ, ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡ; ಸತೀಶ್, ಹಿರಿಯ ಪಶುವೈದ್ಯಕೀಯ ಪರೀಕ್ಷಕರು, ಪ್ರಾಥಮಿಕ ಪಶು ಚಿಕಿತ್ಸಾಲಯ, ಹುಯಿಲಗೋಳ, ಧಾರವಾಡ; ಶೇಖಪ್ಪ, ಕಾರ್ಯನಿರ್ವಾಹಕ ಅಭಿಯಂತರರು, ಯೋಜನಾ ನಿರ್ದೇಶಕರ ಕಚೇರಿ, ಹಾವೇರಿ; ಕುಮಾರಸ್ವಾಮಿ ಪಿ, ಕಛೇರಿ ಅಧೀಕ್ಷಕರು, ಪ್ರಾದೇಶಿಕ ಸಾರಿಗೆ ಕಛೇರಿ, ಎಲೆಕ್ಟ್ರಾನಿಕ್ ಸಿಟಿ, ಬೆಂಗಳೂರು; ಲಕ್ಷ್ಮೀಪತಿ ಸಿ.ಎನ್., ಪ್ರಥಮ ವಿಭಾಗದ ಸಹಾಯಕ, ಸಿಮ್ಸ್ ವೈದ್ಯಕೀಯ ಕಾಲೇಜು, ಶಿವಮೊಗ್ಗ; ಪ್ರಭು ಜೆ, ಸಹಾಯಕ ನಿರ್ದೇಶಕರು, ಕೃಷಿ ಮಾರಾಟ ಡಿಪೋ, ಎಪಿಎಂಸಿ, ದಾವಣಗೆರೆ; ಮತ್ತು ಗಿರೀಶ್ ಡಿಎಂ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್, PWD, ಮೈಸೂರು-ಮಡಿಕೇರಿ ಇವರುಗಳ ಮೇಲೆ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !