ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣ: 37ನೇ ಆರೋಪಿ ಕೋರ್ಟ್ ಗೆ ಶರಣು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮ ಪ್ರಕರಣಸಂಬಂಧ ಇಂದು 37ನೇ ಆರೋಪಿಯೊಬ್ಬರು ನ್ಯಾಯಾಲಯಕ್ಕೆ ಶರಣಾಗಿದ್ದು,ಆರೋಪಿಯನ್ನು 10 ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ, ಕೋರ್ಟ್ ಆದೇಶಿಸಿದೆ.
ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ಸಂಬಂಧ ಈಗಾಗಲೇ ಹಲವರನ್ನು ತನಿಖೆ ನಡೆಸಿಸಿಐಡಿ ಬಂಧಿಸಿದೆ. ತಲೆ ಮರೆಸಿಕೊಂಡಿದ್ದಂತ 37ನೇ ಆರೋಪಿ ಬೋರೇಗೌಡ ಪತ್ತೆಗಾಗಿ ಹುಡುಕಾಟ ನಡೆಸಿತ್ತು. ಇದಲ್ಲದೇ ಅವರ ಆಸ್ತಿ ಜಪ್ತಿಗೂ ಸಿಐಡಿ ಮುಂದಾಗಿತ್ತು.
ಈ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಗೆ ಆರೋಪಿ ಬೋರೇಗೌಡ ನ್ಯಾಯಾಧೀಶರ ಮುಂದೆ ಶರಣಾಗಿದ್ದಾರೆ. ಕೋರ್ಟ್ ಮುಂದೆ ಶರಣಾದಂತ ಅವರನ್ನು 10 ದಿನಗಳ ಕಾಲ ಕೋರ್ಟ್ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ಅಂದಹಾಗೇ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಅಕ್ರಮದ ಬಳಿಕ, ರಾಜ್ಯ ಸರ್ಕಾರದಿಂದ ಪರೀಕ್ಷೆಯನ್ನೇ ರದ್ದುಗೊಳಿಸಲಾಗಿತ್ತು. ಈ ಬಳಿಕ ಶೀಘ್ರವೇ ನೇಮಕಾತಿ ಪರೀಕ್ಷೆಗೆ ಅಧಿಸೂಚನೆ ಹೊರಡಿಸೋದಾಗಿಯೂ ತಿಳಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!