ಅಕ್ರಮ ಗೋ ಸಾಗಣೆ: ಆರೋಪಿಗಳ ಬಂಧನ

ಹೊಸದಿಗಂತ ವರದಿ, ಬಳ್ಳಾರಿ:

ಅಕ್ರಮ ಗೋ‌ ಸಾಗಣೆ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಇಲ್ಲಿನ ಭಜರಂಗದಳ ಜಿಲ್ಲಾ ಸಮೀತಿ ಪದಾಧಿಕಾರಿಗಳು ಆರೋಪಗಳನ್ನು ವಾಹನ ಸಮೇತ ಪೊಲೀಸರಿಗೆ ಒಪ್ಪಿಸದ ಘಟನೆ ಶನಿವಾರ ನಡೆದಿದೆ.
ನಗರ್ ಬೈಪಾಸ್ ರಸ್ತೆಯ ವಿಆರ್ ಎಲ್ ಟ್ರಾನ್ಸ್ ಫೋರ್ಟ್ ಬಳಿ ಭಜರಂಗದಳ ಕಾರ್ಯಕರ್ತರು ಗೋವುಗಳ ಸಾಗಣೆ ಮಾಡುತ್ತಿದ್ದ ವಾಹನ ತಡೆದು, ನಗರದ ಗ್ರಾಮೀಣ ಪೊಲೀಸ್ ಠಾಣೆ ಅಧಿಕಾರಿಗಳಿಗೆ ಒಪ್ಪಿಸಿ, ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಈ ಕುರಿತು ಠಾಣೆಗೆ ದೂರು ನೀಡಿದ ಕಾರ್ಯಕರ್ತರು, ನಗರದಲ್ಲಿ ಅಕ್ರಮ ಗೋಸಾಗಣೆ ದಂಧೆ ಎಗ್ಗಿಲ್ಲದೇ‌ ನಡೆಯುತ್ತಿದ್ದು, ಕೂಡಲೇ ಇದಕ್ಕೆ ಕಡಿವಾಣ ಹಾಕಲು ಅಧಿಕಾರಿಗಳು ‌ಮುಂದಾಗಬೇಕು, ನಾನಾ ಕಡೆ ಗೋ ಸಾಗಣೆ ಮಾಡುವವರನ್ನು ಹಿಡಿದು ಪೊಲೀಸರಿಗೆ ಸಾಕಷ್ಟು ಬಾರಿ‌ ಒಪ್ಪಿಸಿದ್ದರೂ ಇಲ್ಲಿವರೆಗೆ ಕಠಣ ಕ್ರಮ ಕೈಗೊಂಡಿಲ್ಲ, ಕೂಡಲೇ ‌ಸಂಬಂಧಿಸಿದ ಇಲಾಖೆ ಮೇಲಧಿಕಾರಿಗಳು ಈ ಅಕ್ರಮ ದಂದೆಗೆ ಕಡಿವಾಣ ಹಾಕಲು ಮುಂದಾಗಬೇಕು, ನಿರ್ಲಕ್ಷಿಸಿದರೇ ಪ್ರತಿಭನೆಯ ಸ್ವರೂಪ ಬದಲಾಗಲಿದೆ ಎಂದು ಕಾರ್ಯಕರ್ತರು ಎಚ್ಚರಿಸಿದರು. ವಿಶ್ವ ಹಿಂದೂ ಪರಿಷತ್ ಅಧ್ಯಕ್ಷ ಅಶೋಕ್, ಹಿಂದೂ ಜಾಗರಣ ವೇದಿಕೆಯ ಮಲ್ಲಿಕಾರ್ಜುನ್ ಸೇರಿದಂತೆ ಇತರರಿದ್ದರು. ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!