ಅಕ್ರಮ ಗಣಿಗಾರಿಕೆ ಪ್ರಕರಣ: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಗೆ ಇಡಿ ಸಮನ್ಸ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರಿಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ನಾಳೆ ನವೆಂಬರ್ 3 ರಂದು ಕೇಂದ್ರ ತನಿಖಾ ಸಂಸ್ಥೆಯ ಮುಂದೆ ಹಾಜರಾಗುವಂತೆ ಸೋರೆನ್ ಅವರಿಗೆ ಸೂಚಿಸಲಾಗಿದೆ.

ಈ ಪ್ರಕರಣದಲ್ಲಿ ಇಡಿ ಈಗಾಗಲೇ ಸೋರೆನ್ ಸಹಾಯಕ ಪಂಕಜ್ ಮಿಶ್ರಾ ಅವರನ್ನು ಬಂಧಿಸಿದೆ. ಜುಲೈ 8 ರಂದು, ತನಿಖಾ ಸಂಸ್ಥೆಯು ಪಂಕಜ್ ಮಿಶ್ರಾ ಮತ್ತು ಅವರ ವ್ಯಾಪಾರ ಸಹಚರರಿಗೆ ಸಂಬಂಧಿಸಿದ ಜಾರ್ಖಂಡ್‌ನ 18 ಸ್ಥಳಗಳ ಮೇಲೆ ದಾಳಿ ನಡೆಸಿತು.

ಮೂಲಗಳ ವರದಿಯ ಪ್ರಕಾರ ಜಾರ್ಖಂಡ್‌ನ ಬರ್ಹೈತ್, ಸಾಹೇಬ್‌ಗಂಜ್‌ನ ಶಾಸಕ, ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ಪ್ರತಿನಿಧಿಯಾಗಿ ರಾಜಕೀಯ ಪ್ರಭಾವ ಹೊಂದಿರುವ ಪಂಕಜ್ ಮಿಶ್ರಾ ಅವರು ತಮ್ಮ ಸಹಚರರ ಮೂಲಕ ಅಕ್ರಮ ಗಣಿಗಾರಿಕೆ ವ್ಯವಹಾರಗಳು ಮತ್ತು ಒಳನಾಡಿನ ದೋಣಿ ಸೇವೆಗಳನ್ನು ನಿಯಂತ್ರಿಸುತ್ತಾರೆ ಎಂದು ಪಿಎಂಎಲ್‌ಎ ತನಿಖೆಯಿಂದ ತಿಳಿದುಬಂದಿದೆ ಎನ್ನಲಾಗಿದೆ.

ಪ್ರಸ್ತುತ ಸಿಎಂ ಸೂರೇನ್‌ ಅವರಿಗೆ ಇಡಿ ಮುಂದೆ ಹಾಜರಾಗುವಂತೆ ಸಮನ್ಸ್‌ ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!