ಹೊಸದಿಗಂತ ಡಿಜಿಟಲ್ ಡೆಸ್ಕ್:
ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರನ್ನು ಅಪರಾಧಿ ಎಂದು ಸಿಬಿಐ ವಿಶೇಷ ನ್ಯಾಯಾಲಯವು ತೀರ್ಪು ನೀಡಿದೆ. 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್ನಲ್ಲಿ ಪ್ರಕ್ರಿಯೆಗಳು ಮುಗಿದಿದ್ದು, ಸಿಬಿಐ ಜನಾರ್ದನ ರೆಡ್ಡಿ ಅವರನ್ನು ಚಂಚಲಗುಡ ಜೈಲಿಗೆ ಶಿಫ್ಟ್ ಮಾಡಿದೆ.
ಓಬಳಾಪುರಂ ಬೆಟ್ಟದಲ್ಲಿ ಅದಿರನ್ನು ಅಕ್ರಮವಾಗಿ ಗಣಿಕಾರಿಕೆ ಮಾಡಲಾಗಿತ್ತು. 29 ಲಕ್ಷ ಟನ್ ಅದಿರನ್ನು ಲೂಟಿ ಮಾಡಿ 884 ಕೋಟಿ ರೂ. ಆದಾಯ ಪಡೆದಿದ್ದರು. ಈ ಪ್ರಕರಣದ ತನಿಖೆಗಾಗಿ 2009ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರು ಸಿಬಿಐ ತನಿಖೆಗೆ ಆದೇಶಿಸಿದ್ದರು. 13 ವರ್ಷಗಳ ಕಾಲ ವಿಚಾರಣೆ ನಡೆದಿತ್ತು. ಮೂರು ಸಾವಿರಕ್ಕೂ ಹೆಚ್ಚು ದಾಖಲೆಗಳ ಪರಿಶೀಲನೆ ಹಾಗೂ 219 ಸಾಕ್ಷಿಗಳ ವಿಚಾರಣೆ ಮಾಡಿತ್ತು. ಎಲ್ಲವನ್ನೂ ಪರಿಶೀಲಿಸಿದ ಕೋರ್ಟ್ ಇಂದು ತೀರ್ಪು ಪ್ರಕಟಿಸಿದೆ.