ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣ: CID ಯಿಂದ ಐವರ ಬಂಧನ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

2014-15 ರ ಶಿಕ್ಷಕರ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಐವರನ್ನು ಬಂಧಿಸಿದ್ದಾರೆ.
ಸಮಗ್ರ ಶಿಕ್ಷಣ ಅಭಿಯಾನ ನಿರ್ದೇಶಕಿ ಗೀತಾ , ಪಠ್ಯ ಪುಸ್ತಕ ಸಮಿತಿ ನಿರ್ದೇಶಕ ಮಾದೇಗೌಡ , ನಿವೃ‍ತ್ತ ಜಂಟಿ ನಿರ್ದೇಶಕ ಜಿ.ಆರ್ ಬಸವರಾಜು, ನಿವೃತ್ತ ಜಂಟಿ ನಿರ್ದೇಶಕಿ ಕೆ.ರತ್ನಯ್ಯ ಬಂಧನವಾಗಿದೆ.
ಬಂಧಿತ ಐವರು ಆರೋಪಿಗಳನ್ನು ಸಿಐಡಿ ಪೊಲೀಸರು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿದ್ದಾರೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸವ ಹಿನ್ನೆಲೆ ಸಿಐಡಿ ಪೊಲೀಸರು ಆರೋಪಿಗಳನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಬಂಧಿತ ಐವರು ಆರೋಪಿಗಳು ಅಕ್ಟೋಬರ್ 1 ರ ವರೆಗೆ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ ನೀಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!