ಗಂಗಾವಳಿ ನದಿ ತೀರದಲ್ಲಿ ಅಕ್ರಮ ಮರಳು ಸಂಗ್ರಹ: ಪೊಲೀಸರ ದಾಳಿ

ಹೊಸದಿಗಂತ ವರದಿ,ಅಂಕೋಲಾ:

ತಾಲೂಕಿನ ಸಗಡಗೇರಿ ಗ್ರಾಮದ ಗಂಗಾವಳಿ ನದಿ ತೀರದಲ್ಲಿನ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟ ಮರಳನ್ನು ಅಂಕೋಲಾ ಪೊಲೀಸರು ವಶಪಡಿಸಿಕೊಂಡು ಕಂದಾಯ ಇಲಾಖೆಗೆ ಹಸ್ತಾಂತರಿಸಿದ್ದಾರೆ.
ಸಗಡಗೇರಿಯಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ದೂರು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಪನ್ನೇಕರ್ ಅವರು ಕ್ರಮ ಕೈಗೊಳ್ಳುವಂತೆ ಆದೇಶ ನೀಡಿರುವುದರಿಂದ ಅಂಕೋಲಾ ಪೊಲೀಸರ ತಂಡ ಗುರುವಾರ ರಾತ್ರಿ ದಾಳಿ ನಡೆಸಿದ್ದು ಹೊಂಡ ತೆಗೆದು ಹೂತಿಟ್ಟ ಸುಮಾರು 70 ಬುಟ್ಟಿ ಅಕ್ರಮ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಡಿ.ವೈ.ಎಸ್. ಪಿ ವೆಲೆಂಟನ್ ಡಿಸೋಜ ಅವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಅವರ ನಿರ್ದೇಶನದಲ್ಲಿ ಪಿ.ಎಸ್. ಐ ಪ್ರವಿಣಕುಮಾರ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!