Sunday, September 21, 2025

ಕೈ ಮುಗಿದು ಕೇಳಿಕೊಳ್ಳುತ್ತೇನೆ, ಸಮಸ್ಯೆ ತಂದುಕೊಳ್ಳಬೇಡಿ: ಅನಿರುದ್ಧ್ ಹೀಗ್ಯಾಕಂದ್ರು?

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಿಷ್ಣುವರ್ಧನ್ ಜನ್ಮದಿನ ಸಮೀಪಿಸುತ್ತಿದ್ದಂತೆ ಅಭಿಮಾನ್ ಸ್ಟುಡಿಯೋದಲ್ಲಿ ಬರ್ತ್​ಡೇ ಆಚರಿಸಬಾರದು ಎಂದು ಕೋರ್ಟ್ ಆದೇಶ ನೀಡಿದೆ. ಹೀಗಿರುವಾಗಲೇ ಅನಿರುದ್ಧ್ ಅವರು ಒಂದು ಎಚ್ಚರಿಕೆ ನೀಡಿದ್ದಾರೆ.

‘ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಮ್ಮ ಕುಟುಂಬದ ವಿರುದ್ಧ ನಕಾರಾತ್ಮಕ ಕಾಮೆಂಟ್​ಗಳು ಬರುತ್ತಿವೆ. ನಾನು ಹಿಂದೆ ಕೂಡ ಅಭಿಮಾನಿಗಳ ಸಮ್ಮುಖದಲ್ಲಿ, ಮಾಧ್ಯಮದ ಎದುರು ಎಚ್ಚರಿಕೆ ನೀಡಿದ್ದೆ. ಇದೇ ತರಹದ ಕಾಮೆಂಟ್​ಗಳು ಬರುತ್ತಿದ್ದರೆ ಅಂಥವರ ವಿರುದ್ಧ ದೂರು ದಾಖಲಿಸುತ್ತೇನೆ ಎಂದಿದ್ದೆ. ಆದರೂ ಕೂಡ ಈ ಕಾಮೆಂಟ್​ಗಳು ನಿಲ್ಲುತ್ತಿಲ್ಲ’ ಎಂದು ಅನಿರುದ್ಧ್ ಹೇಳಿದ್ದಾರೆ.

‘ಸೆಪ್ಟೆಂಬರ್ 16ರಂದು ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇನೆ. ಇದನ್ನು ಮತ್ತೆ ಮುಂದುವರಿಸಿದರೆ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕಾಗುತ್ತದೆ. ಇನ್ನೊಂದು ಬಾರಿ ಕೈ ಮುಗಿದು ಕಳಕಳಿಯಿಂದ ಕೇಳಿಕೊಳ್ಳುತ್ತೇನೆ. ಸಾಮಾಜಿಕ ಜಾಲತಾಣದಲ್ಲಿ, ವೇದಿಕೆ ಮೇಲೆ ಈ ರೀತಿ ಕಮೆಂಟ್ ಮಾಡಿ ಸಮಸ್ಯೆ ತಂದುಕೊಳ್ಳಬೇಡಿ’ ಎಂದು ಅವರು ಕೋರಿದ್ದಾರೆ.

ಇದನ್ನೂ ಓದಿ