ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ‌ ಮಾಡಿ: ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಸೂರು-ಕೊಡಗು ಸಂಸದನಾಗಿ ಕೆಲಸ ಮಾಡಿದ್ದ ಸಂಸದ ಪ್ರತಾಪ್ ಸಿಂಹ (Pratap Simha) ಗೆ ಈ ಬಾರಿ ಟಿಕೆಟ್ ಕೈತಪ್ಪಿ ಹೋಗಿದೆ. ರಾಜ ವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಲಾಗಿದೆ.

ಇದಾದ ಬಳಿಕ ಇಂದು ನಾನು ಮಾಜಿಯಾದರು ಕೆಲಸಕ್ಕಾಗಿ ಕರೆ‌ ಮಾಡಿ ಎಂದು ಕಾರ್ಯಕರ್ತರಿಗೆ ಪ್ರತಾಪ್ ಸಿಂಹ ಸಂದೇಶ ರವಾನಿಸಿದ್ದಾರೆ.

ಈ ಕುರಿತಾಗಿ ಸೋಶಿಯಲ್​ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿರುವ ಅವರು, ನನ್ನ ಪ್ರೀತಿಯ ಕಾರ್ಯಕರ್ತರೇ ಮತ್ತು ಕೊಡಗು-ಮೈಸೂರಿನ ಬಂಧುಗಳೇ, ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ ಕರೆ ಮಾಡುವುದು ಎಂದು ಅಂಜಬೇಡಿ, ಈಗಲೂ ಮತ್ತು ಮಾಜಿಯಾದ ಮೇಲೂ ಕೈಲಾದ ಕೆಲಸ ಮಾಡಿಕೊಡುತ್ತೇನೆ. ಸೋಮವಾರದಿಂದ ಪ್ರಚಾರ ಕಾರ್ಯಕ್ಕೆ ಬರುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!