ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆಯಾಗಿದ್ದು, ಇಂದಿನಿದಲೇ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ವಾಹನದಲ್ಲಿ ಪ್ರಚಾರ ಕಾರ್ಯ ಕೈಗೊಂಡಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರಿ ಕಾರನ್ನು ಬಿಟ್ಟು ಖಾಸಗಿ ವಾಹನ ಏರಿದ್ದಾರೆ.
ನೀತಿ ಸಂಹಿತೆ ಜಾರಿಯಾದ ಬಳಿಕ ಯಾವುದೇ ಸರ್ಕಾರಿ ಕಾರ್ಯಕ್ರಮಗಳು, ಸರ್ಕಾರಿ ವಾಹನಗಳು, ಸಭೆ-ಸಮಾರಂಭಗಳಿಗೆ ನಿರ್ಬಂಧ ಹೇರಲಾಗುತ್ತದೆ. ಹಾಗಾಗಿ ಸಿದ್ದರಾಮಯ್ಯ ವರುಣಾ ಕ್ಷೇತ್ರದ ಪ್ರಚಾರ ಸ್ಥಗಿತಗೊಳಿಸಿ ವಾಪಸಾಗಿದ್ದಾರೆ.
ವರುಣಾ ಕ್ಷೇತ್ರದಲ್ಲಿ ರೋಡ್ ಶೋ ನಡೆಸುತ್ತಿದ್ದ ಸಿದ್ದರಾಮಯ್ಯ, ಚುನಾವಣಾ ದಿನಾಂಕ ಘೋಷಣೆಯಾದ ವಿಚಾರ ತಿಳಿದಿದ್ದಾರೆ. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾದ ಮಾಹಿತಿ ಪಡೆದು ಸರ್ಕಾರ ಕೊಟ್ಟಿದ್ದ ಕಾರನ್ನು ಬಿಟ್ಟು ಖಾಸಗಿ ಕಾರನ್ನು ಏರಿದ್ದಾರೆ. ಸರ್ಕಾರಿ ವಾಹನದಲ್ಲಿದ್ದ ತಮ್ಮೆಲ್ಲಾ ವಸ್ತುಗಳನ್ನು ಖಾಸಗಿ ಕಾರಿಗೆ ಶಿಫ್ಟ್ ಮಾಡಿದ್ದು, ನೀತಿ ಸಂಹಿತೆ ಪಾಲನೆ ಮಾಡಿದ್ದಾರೆ.