SC ಜಾತಿಗೆ ಒಳ ಮೀಸಲಾತಿ ಜಾರಿ : ಕೇಂದ್ರ ಸರಕಾರಕ್ಕೆ ಶಿಫಾರಸ್ಸಿಗೆ ‘ರಾಜ್ಯ ಸಚಿವ ಸಂಪುಟ’ ನಿರ್ಧಾರ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಪರಿಶಿಷ್ಟ ಜಾತಿಗೆ(SC) ಒಳ ಮೀಸಲಾತಿ ಕಲ್ಪಿಸುವ ನ್ಯಾ.ಸದಾಶಿವ ಆಯೋಗದ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಇನ್ನು ಈ ಕುರಿತು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸಜ್ಜಾಗಿದೆ.

ಪರಿಶಿಷ್ಟ ಜಾತಿಯಲ್ಲಿರುವ ವಿವಿಧ ಸಮುದಾಯಗಳಿಗೆ ಒಳ ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್.​ಕೆ ಪಾಟೀಲ್ ಹಾಗೂ ಎಚ್​ಸಿ ಮಹಾದೇವಪ್ಪ, ‘ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ಕಲ್ಪಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುತ್ತೇವೆ. ಇನ್ನು ಹೊಸ ಜನಗಣತಿ ಪ್ರಕಾರ ಮೀಸಲಾತಿ ಪರಿಷ್ಕರಿಸಲು ಸಂವಿಧಾನಬದ್ಧವಾಗಿ ರಾಜ್ಯಗಳಿಗೆ ಅಧಿಕಾರ ನೀಡುವಂತೆ ಮತ್ತು ಒಳ ಮೀಸಲಾತಿಗಾಗಿ ಸಂವಿಧಾನದ ಅನುಚ್ಛೇದ 341ಕ್ಕೆ ತಿದ್ದುಪಡಿ ತರುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿದೆ ಎಂದರು.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!