ಹೊಸದಿಗಂತ ಡಿಜಿಟಲ್ ಡೆಸ್ಕ್ :
ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರಾಜ್ಯ ಬಜೆಟ್ ಅನ್ನು ಮಂಡಿಸುತ್ತಿದ್ದು, ‘ಬದುಕುವ ದಾರಿ’ ಎಂಬ ಹೊಸ ಯೋಜನೆ ಜಾರಿ ಮಾಡುವುದಾಗಿ ಘೋಷಿಸಿದ್ದಾರೆ.
ಏನಿದು ‘ಬದುಕುವ ದಾರಿ’ ಯೋಜನೆ ? :
ಈ ಹೊಸ ಯೋಜನೆಯು ಗ್ರಾಮೀಣ ಯುವಕರ ಸ್ವಯಂ ಉದ್ಯೋಗ ಪ್ರೋತ್ಸಾಹಿಸಲು ಸಹಾಯ ಮಾಡುತ್ತದೆ. ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯಡಿ ಯುವಕರ ಜಂಟಿ ಬಾಧ್ಯತಾ ಗುಂಪುಗಳಿಗೆ ತಲಾ ಹತ್ತು ಸಾವಿರ ರೂ.ನಂತೆ ವಿವಿಧ ಚಟುವಟಿಕೆಗೆ 5 ಲಕ್ಷ ವರೆಗೆ ಸಹಾಯಧನ ನೀಡಲಾಗುತ್ತದೆ. ಈ ಮೂಲಕ ‘ಬದುಕುವ ದಾರಿ’ ಹೊಸ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ವಿದ್ಯಾಭ್ಯಾಸ ಮುಂದುವರಿಸಲು ಇಚ್ಛಿಸುವ ಯುವಕರಿಗೆ ಪ್ರೋತ್ಸಾಹ. ಐಟಿಐ ತರಬೇತಿಗಾಗಿ 1500ರೂ. ಶಿಷ್ಯ ವೇತನ ನೀಡುವುದಾಗಿಯೂ ಹೇಳಿದ್ದಾರೆ.