144ಸೆಕ್ಷನ್‌ ಜಾರಿ: ಇಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಭೇಟಿಗೆ ನಿರ್ಬಂಧ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಮಹಿಷ ದಸರಾ ಆಚರಣೆ ವಿವಾದ ಹಿನ್ನೆಲೆಯಲ್ಲಿ, ಮೈಸೂರು ನಗರ ಪೊಲೀಸ್ ಆಯುಕ್ತರು ಚಾಮುಂಡಿಬೆಟ್ಟದಲ್ಲಿ ಇಂದು (ಅಕ್ಟೋಬರ್ 13 ) ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಹಾಗಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಸಂಜೆಯವರೆಗೆ ಚಾಮುಂಡಿಬೆಟ್ಟಕ್ಕೆ ಭಕ್ತರು ಬರದಂತೆ ನಿರ್ಬಂಧ ಹೇರಲಾಗಿದೆ.

ಚಾಮುಂಡಿಬೆಟ್ಟದಲ್ಲಿ ಇರುವ ನಿವಾಸಿಗಳಿಗೆ, ತುರ್ತು ಸೇವೆಗಳಿಗೆ ಹಾಗೂ ಅಧಿಕೃತ ಅಧಿಕಾರಿಗಳಿಗೆ ಈ ನಿಷೇಧಾಜ್ಞೆ ಅನ್ವಯಿಸುವುದಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದರು.

144ಸೆಕ್ಷನ್‌ ಜಾರಿ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟ ಬಿಕೋ ಎನ್ನುತ್ತಿದೆ. ಬೆಳಗ್ಗೆಯಿಂದಲೇ ಭಕ್ತರು ಸರತಿ ಸಾಲಿಗಳಲ್ಲಿ ನಿಂತು ಅಮ್ಮನವರು ದರುಶನಕ್ಕಾಗಿ ಕಾಯುತ್ತಿದ್ದರು. ಸದಾ ಭಕ್ತರಿಂದ ತುಂಬಿ ತುಳುಕುತ್ತಿದ್ದ ಬೆಟ್ಟ ಇಂದು ಖಾಲಿಖಾಲಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!