ಬಿಜೆಪಿ ಮಹತ್ವದ ಸಭೆ: ದಿಗ್ಗಜ ನಾಯಕರ ಮೊದಲ ಪಟ್ಟಿ ಘೋಷಿಸಲು ಕೇಸರಿ ಸೇನೆ ಸಜ್ಜು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಸಮರಕ್ಕೆ ಇಂದು ಅಧಿಕೃತವಾಗಿ ಕಮಲ ಪಡೆ ಅಖಾಡಕ್ಕಿಳಿಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಭಾರತೀಯ ಜನತಾ ಪಕ್ಷದ ಮಹತ್ವದ ಸಭೆ ನಡೆಯಲಿದೆ. ಕೇಸರಿ ಸೇನೆಯ ದಿಗ್ಗಜ ನಾಯಕರ ಮೊದಲ ಪಟ್ಟಿ ಇಂದು ಸಿದ್ಧಗೊಳ್ಳಲಿದೆ.

ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯ ಮೊದಲ ಸಭೆ ಇಂದು ದೆಹಲಿಯಲ್ಲಿ ನಡೆಯಲಿದೆ. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಹಲವು ರಾಜ್ಯಗಳ ನಾಯಕರ ಜೊತೆ, ಇಂದು ಸಂಜೆ 6 ಗಂಟೆಗೆ ನಡೆಯುವ ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸಭೆಯಲ್ಲಿ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪಿಸಲಾಗುವುದು.

ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಕೂಡ ಇಂದು ದೆಹಲಿಯ ಸಭೆಗೆ ತೆರಳಲಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!