ಒಂದಾರ್ಥದಲ್ಲಿ ನಾವು ಈ ಪಂದ್ಯ ಸೋತಿದ್ದು ಒಳ್ಳೆಯದೇ ಆಯ್ತು.. ಹೀಗ್ಯಾಕಂದ್ರು RCB ನಾಯಕ?

ಹೊಸದಿಗಂತ ಡಿಜಿಟಲ್ ಡೆಸ್ಕ್:

IPL 2025​ನ 65ನೇ ಪಂದ್ಯದಲ್ಲಿ ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಆರ್​ಸಿಬಿ ಮತ್ತು ಎಸ್​ಆರ್​​ಹೆಚ್​ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಹಂಗಾಮಿ ನಾಯಕ ಜಿತೇಶ್ ಶರ್ಮಾ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸನ್​ರೈಸರ್ಸ್ ಹೈದರಾಬಾದ್ 20 ಓವರ್​ಗಳಲ್ಲಿ 231 ರನ್ ಕಲೆಹಾಕಿತು. 232 ರನ್​ಗಳ ಕಠಿಣ ಗುರಿ ಬೆನ್ನತ್ತಿದ ಆರ್​ಸಿಬಿ 19.5 ಓವರ್​ಗಳಲ್ಲಿ 189 ರನ್​ಗಳಿಸಿ ಸೋಲನುಭವಿಸಿದೆ.

ಈ ಸೋಲಿನ ಬಳಿಕ ಮಾತನಾಡಿದ ಆರ್​ಸಿಬಿ ತಂಡದ ನಾಯಕ ಜಿತೇಶ್ ಶರ್ಮಾ, ಈ ಪಂದ್ಯದಲ್ಲಿ ನಾವು 20-30 ಹೆಚ್ಚುವರಿ ರನ್​ಗಳನ್ನು ನೀಡಿದ್ದು ನಮ್ಮ ಪಾಲಿಗೆ ದುಬಾರಿಯಾಯಿತು. ಸನ್​ರೈಸರ್ಸ್ ಹೈದರಾಬಾದ್ ಬ್ಯಾಟರ್​ಗಳಿಗೆ ಹೋಲಿಸಿದರೆ, ನಮ್ಮ ಬ್ಯಾಟಿಂಗ್​ನಲ್ಲಿ ತೀವ್ರತೆ ಇರಲಿಲ್ಲ ಎಂಬುದು ನನ್ನ ಭಾವನೆ. .ಒಂದಾರ್ಥದಲ್ಲಿ ನಾವು ಈ ಪಂದ್ಯವನ್ನು ಸೋತಿದ್ದು ಒಳ್ಳೆಯದೇ ಆಯ್ತು. ಏಕೆಂದರೆ ಚೇಸಿಂಗ್ ವಿಷಯದಲ್ಲಿ ಎಚ್ಚೆತ್ತುಕೊಳ್ಳಬೇಕಿದೆ. ಈ ತಪ್ಪುಗಳನ್ನು ತಿದ್ದಿ ಮುಂಬರುವ ಪಂದ್ಯಗಳಲ್ಲಿ ಉತ್ತಮ ರೀತಿಯಲ್ಲಿ ಆಡುತ್ತೇವೆ ಎಂಬ ವಿಶ್ವಾಸವಿದೆ ಎಂದು ಜಿತೇಶ್ ಶರ್ಮಾ ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!