ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜಧಾನಿ ಬೆಂಗಳೂರಿನಲ್ಲಿ ಮಳೆ ವಾತಾವರಣ ಆರಂಭವಾಗಿದೆ. ಮಳೆ ಅವಾಂತರದಿಂದಾಗಿ ಜನರಿಗೆ ಸಂಕಷ್ಟದ ಸ್ಥಿತಿ ಎದುರಾಗಿದೆ. ಮಳೆ ಸುರಿಯುವಾಗ ಮರದ ಕೊಂಬೆ ಬಿದ್ದು ರಸ್ತೆ ಮೇಲೆ ಹೋಗುತ್ತಿದ್ದ ಓರ್ವ ಟೆಕ್ಕಿಯ ಬೆನ್ನು ಮೂಳೆ ಮುರಿದ ಘಟನೆ ಸಿವಿ ರಾಮನ್ ನಗರದ ನಾಗವಾರಪಾಳ್ಯದ 2ನೇ ಕ್ರಾಸ್ನಲ್ಲಿ ನಡೆದಿದೆ.
ಐಟಿ ಕಂಪನಿ ಉದ್ಯೋಗಿ ರವಿಕುಮಾರ್ (26) ಗಾಯಾಳು. ಮಳೆ ಸುರಿಯುತ್ತಿರುವಾಗ ಟೆಕ್ಕಿಯು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಇದೇ ಸಮಯಕ್ಕೆ ಸರಿಯಾಗಿ ಮರವೊಂದು ಮುರಿದು ಟೆಕ್ಕಿ ಮೇಲೆ ಬಿದ್ದಿದೆ. ಪರಿಣಾಮ ಬೆನ್ನು ಮೂಳೆ ಮುರಿದು ಹೋಗಿ ತೀವ್ರವಾಗಿ ಗಾಯಗೊಂಡಿದ್ದಾನೆ. ಸದ್ಯ ಗಾಯಾಳುವಿಗೆ ನಗರದ ಹೆಚ್ಎಎಲ್ನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.