ಚನ್ನಗಿರಿ ಪ್ರಕರಣದಲ್ಲಿ ಯಾರ ವೈಫಲ್ಯ ಇದ್ದರೂ ಕ್ರಮ ಕೈಗೊಳ್ತೀವಿ: ಪರಮೇಶ್ವರ್ ಭರವಸೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚನ್ನಗಿರಿ ಲಾಕಪ್ ಡೆತ್ ಪ್ರಕರಣದಲ್ಲಿ ಯಾರದೇ ತಪ್ಪಿದ್ದರು, ಕ್ರಮ ಕೈಗೊಳ್ಳಲು ಹಿಂಜರಿಯುವುದಿಲ್ಲ ಎಂದು ಜಿ.ಪರಮೇಶ್ವರ್ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿದ್ದೇವೆ. ಯಾರ ವೈಫಲ್ಯ ಇದ್ದರೂ ಕ್ರಮ ಕೈಗೊಳ್ತೀವಿ. ಪೊಲೀಸರು ತಿಂಗಳು ವಸೂಲಿ ಮಾಡಿರೋದು ಕಂಡು ಬಂದರೆ ಸೇವೆಯಿಂದಲೇ ವಜಾ ಮಾಡುತ್ತೇವೆ.

ಅಂತಹ ಅಧಿಕಾರಿಗಳು ಅಧಿಕಾರದಲ್ಲಿ ಇರಬಾರದು. ಘಟನೆ ಸಂಬಂಧ ಈಗಾಗಲೇ ಮೂವರು ಪೊಲೀಸ್ ಅಧಿಕಾರಿಗಳ ಅಮಾನತ್ತಾಗಿದೆ. ಪೊಲೀಸರಿಗೆ ಕಮಿಷನ್ ಕೊಡಲಿಲ್ಲ ಎಂಬ ಕಾರಣಕ್ಕೆ ಈ ಘಟನೆ ಆಗಿದೆ ತನಿಖೆಯಲ್ಲಿ ಬೆಳಕಿಗೆ ಬಂದರೆ ಅವರನ್ನ ವಜಾ ಮಾಡುವವರೆಗೂ ಕ್ರಮ ತೆಗೆದುಕೊಳ್ತೇವೆ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!