ಹೊಸ ದಿಗಂತ ವರದಿ, ಹುಬ್ಬಳ್ಳಿ:
ಗುತ್ತಿಗೆ ಸಂಘದ ಅಧ್ಯಕ್ಷರು ಕಾಂಗ್ರೆಸ್ ಸರ್ಕಾರದಲ್ಲಿ ಶೇ. 40ರಷ್ಟು ಕಮಿಷನ್ ಪಡೆಯಲಾಗುತ್ತಿದೆ ಎಂದು ಆರೋಪಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೆ ಬಿಜೆಪಿ ಸರ್ಕಾರ ಅವಧಿಯಲ್ಲಿ ಇದೇ ರೀತಿ ಆರೋಪ ಮಾಡಿದಾಗ ಕಾಂಗ್ರೆಸ್ ನಾಯಕರು ಹೋರಾಟ ಮಾಡಿ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಲಾಗಿತ್ತು ಎಂದರು.
ಸಿದ್ದರಾಮಯ್ಯ ಅವರು ಅವತ್ತು ರೋಷಾವೇಷವಾಗಿ ಈ ಬಗ್ಗೆ ತನಿಖೆ ಮಾಡಿಸಲಾಗುವುದು ಎಂದು ಹೇಳಿದ್ದರು. ಈಗ ತಾವು ಮುಖ್ಯಮಂತ್ರಿ ಇದ್ದು, ಸಂಪೂರ್ಣ ತನಿಖೆ ಮಾಡಿಸಬೇಕು. ಕಮಿಷನ್ನಲ್ಲಿ ಅಧಿಕಾರಿ, ಶಾಸಕ ಹಾಗೂ ಮಂತ್ರಿಗಳಿದ್ದರು ಸೂಕ್ತ ತನಿಖೆ ಮಾಡಿಸುವ ಮೂಲಕ ತಪ್ಪಿಸ್ಥರಿಗೆ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು ಎಂದು ಹೇಳಿದರು.