ಗುಜರಾತ್​ನಲ್ಲಿ ಅಧಿಕಾರಕ್ಕೆ ಬಂದ್ರೆ ನಿರುದ್ಯೋಗಿಗಳಿಗೆ ತಿಂಗಳಿಗೆ 3 ಸಾವಿರ: ಕೇಜ್ರಿವಾಲ್ ಘೋಷಣೆ

ಹೊಸ ಡಿಜಿನಂಥ ಡಿಜಿಟಲ್ ಡೆಸ್ಕ್:

ಪಂಜಾಬ್ ರಾಜ್ಯ ಗೆಲುವಿನಲ್ಲಿ ಯಶಸ್ವಿಯಾಗಿರುವ ಆಮ್​ ಆದ್ಮಿ ಪಕ್ಷ ಇದೀಗ ಗುಜರಾತ್​ ಮೇಲೆ ಕಣ್ಣಿಟ್ಟಿದೆ. ಈ ವರ್ಷಾಂತ್ಯದಲ್ಲಿ ವಿಧಾನಸಭೆಗೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಈಗಿನಿಂದಲೇ ಆಪ್ ಮುಖ್ಯಸ್ಥ ಕೇಜ್ರಿವಾಲ್ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
ವೆರಾವಲ್​ನಲ್ಲಿ ಆಯೋಜನೆಗೊಂಡಿದ್ದ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ನಿರುದ್ಯೋಗಿ ಯುವಕನಿಗೂ ಮಾಸಿಕ 3 ಸಾವಿರ ರೂ. ನಿರುದ್ಯೋಗ ಭತ್ಯೆ ಹಾಗೂ ಪ್ರತಿಯೊಬ್ಬರಿಗೂ ಉದ್ಯೋಗ ನೀಡಲಾಗುವುದೆಂಬ ಭರ್ಜರಿ ಘೋಷಣೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ವರ್ಷದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ ಮಾಡುವ ಸಾಮರ್ಥ್ಯ ನಮ್ಮ ಪಕ್ಷಕ್ಕಿದೆ ಎಂದು ಹೇಳಿದರು.
ಕಳೆದ ಕೆಲವು ದಿನಗಳ ಹಿಂದೆ ರಾಜ್ಯದಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ತಿಂಗಳಿಗೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್​ ನೀಡುವುದಾಗಿ ಭರವಸೆ ನೀಡಿದ್ದರು. ಈ ಬೆನ್ನಲ್ಲೇ ಇದೀಗ ನಿರುದ್ಯೋಗಿ ಯುವಕರಿಗೆ ಹೊಸ ಆಫರ್ ಕೊಟ್ಟಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!