ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣಾ ಮತದಾನ ಬಿರುಸಿನಿಂದ ಸಾಗಿದೆ. ಇಂದು ರಾಜ್ಯಾದ್ಯಂತ ಜನ ತಮ್ಮ ನಾಯಕನ ಆಯ್ಕೆಯಲ್ಲಿ ನಿರತರಾಗಿದ್ದಾರೆ. ಪ್ರಜಾಪ್ರಭುತ್ವ ಹಬ್ಬದಲ್ಲಿ ಎಲ್ಲರೂ ಪಾಲ್ಗೊಳ್ಳುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮನವಿ ಮಾಡಿದ್ದಾರೆ.
ಚುನಾವಣೆ ಕುರಿತು ಟ್ವೀಟ್ ಮಾಡಿರುವ ನಡ್ಡಾ, ಕರ್ನಾಟಕ ಮತದಾರರು ಪ್ರಜಾಪ್ರಭುತ್ವದ ಹಬ್ಬದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೇಳಿದರು. ಕರ್ನಾಟಕದ ಭವಿಷ್ಯವನ್ನು ನಿರ್ಧರಿಸುವಲ್ಲಿ ಈ ಚುನಾವಣೆಗಳು ನಿರ್ಣಾಯಕವಾಗಿವೆ. ರಾಜ್ಯದ ಪ್ರಗತಿಗೆ ನಿರಂತರತೆಯನ್ನು ಒದಗಿಸುವ ಮತ್ತು ಜನರ ಆಶೋತ್ತರಗಳನ್ನು ಈಡೇರಿಸಲು ಬದ್ಧವಾಗಿರುವ ಸರ್ಕಾರವನ್ನು ಅಧಿಕಾರಕ್ಕೆ ತರಲು ನಾನು ಪ್ರತಿಯೊಬ್ಬರನ್ನು ಒತ್ತಾಯಿಸುತ್ತೇನೆ.
I urge all the voters in Karnataka to participate in the festival of democracy in maximum numbers.
This election is crucial in deciding the future of Karnataka, and I appeal to all of you to form a government that keeps the progress of the state in continuation and is committed…— Jagat Prakash Nadda (@JPNadda) May 10, 2023