ಮೈಸೂರಿನಲ್ಲಿ ಮಳೆಗೆ ಮನೆಗೋಡೆ ಕುಸಿತ, ಮಗುವಿನ ಆರೈಕೆಯಲ್ಲಿದ್ದ ಬಾಣಂತಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು, ಮೈಸೂರಿನಲ್ಲಿ ಮಳೆಗೆ ಮನೆಯ ಗೋಡೆ ಕುಸಿದು ಬಾಣಂತಿ ಮೃತಪಟ್ಟಿದ್ದಾರೆ.

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಕಗ್ಗುಂಡಿ ಗ್ರಾಮದಲ್ಲಿ ಘಟನೆ ನಡೆದಿದೆ.

ಹೇಮಲತಾ(22) ಮೃತ ರ್ದುದೈವಿ. ಇತ್ತ ಅದೃಷ್ಟವಶಾತ್​ ಮಗುವೊಂದು ಪಾರಾಗಿದೆ. ಕಳೆದ ಕೆಲ ದಿನಗಳಿಂದ ಮಳೆ ಅಬ್ಬರ ಜೋರಾಗಿದ್ದು, ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ದುರ್ಘಟನೆ ನಡೆದಿದೆ. ಕೆಲವೇ ತಿಂಗಳ ಮಗು ಇದಾಗಿದ್ದು, ಇದೀಗ ತಾಯಿಯ ಆರೈಕೆಯಿಲ್ಲದೆ ಬೆಳೆಯಬೇಕಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!