ಪಂಚರತ್ನ ಯಾತ್ರೆಯಲ್ಲಿ ಹೆಚ್.ಡಿ. ಕುಮಾರಸ್ವಾಮಿಗೆ ಮುತ್ತಿಟ್ಟ ಮಹಿಳೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನ ಯಶವಂತರಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಪಂಚರತ್ನ ಯಾತ್ರೆ ವೇಳೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಮಹಿಳಾ ಕಾರ್ಯಕರ್ತೆಯೊಬ್ಬರು ಮುತ್ತು ನೀಡಿದ ಘಟನೆ ನಡೆದಿದೆ.

ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಮುಕ್ತಾಯಗೊಂಡಿದ್ದರೂ ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಪಂಚರತ್ನ ಯಾತ್ರೆಯ 2ನೇ ಯಾತ್ರೆಯನ್ನು ಆರಂಭಿಸಿದ್ದಾರೆ. ಇಂದು ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿದ್ದ ಪಂಚರತ್ನ ಯಾತ್ರೆಯ ವೇಳೆ ಜೆಡಿಎಸ್‌ ಕಾರ್ಯಕರ್ತೆ ಕುಮಾರಸ್ವಾಮಿ ಅವರನ್ನು ತಬ್ಬಿಹಿಡಿದು ಮುತ್ತು ಕೊಟ್ಟಿದ್ದಾರೆ.

ಕುಮಾರಸ್ವಾಮಿ ಅವರು ಭಾಷಣ ಮುಗಿಸಿ ವಾಪಸ್ ತಿರುಗುತ್ತಿರುವ ವೇಳೆಯಲ್ಲಿ ಅವರ ತಲೆಯನ್ನು ಹಿಡಿದು ಮುತ್ತು ನೀಡಿದ್ದಾರೆ. ಇನ್ನು ಯಶವಂತಪುರ ವಿಧಾನಸಭಾ ಕ್ಷೇತ್ರ ಮುಗಿಸಿ ಗೋವಿಂದರಾಜ ನಗರ ಕ್ಷೇತ್ರದಲ್ಲಿ ಪಂಚರತ್ನ ಯಾತ್ರೆಯನ್ನು ಕುಮಾರಸ್ವಾಮಿ ಮುಂದುವರೆಸಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚು ಸ್ಥಾನ ಪಡೆಯುವ ನಿಟ್ಟಿನಲ್ಲಿ ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಯಶವಂತಪುರ ಕ್ಷೇತ್ರದ ಪಕ್ಷದ ಅಭ್ಯರ್ಥಿ ಜಯವರಾಯಗೌಡರ ಪರ ಪ್ರಚಾರ ನಡೆಸಿದ್ದಾರೆ. ಈಗ ಗೋವಿಂದರಾಜ ನಗರ ಕ್ಷೇತ್ರದ ಅಭ್ಯರ್ಥಿ ಪ್ರಕಾಶ್ ಪರ ಪ್ರಚಾರ ನಡೆಸುತ್ತಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!