ಹೊಸದಿಗಂತ ವರದಿ ವಿಜಯಪುರ:
ಕನ್ನಡ ನಾಡಿನ ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹೋರಾಟಗಾರರ ರಥಯಾತ್ರೆಗೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಸಾವರ್ಕರ್ ರಥಯಾತ್ರೆ ವಿಚಾರವಾಗಿ ಹೇಳಿಕೆ ನೀಡಿ, ವೀರ ರಾಣಿ ಕಿತ್ತೂರು ಚನ್ನಮ್ಮ, ಸಂಗೊಳ್ಳಿ ರಾಯಣ್ಣ, ಹಲಗಲಿಯ ಬೇಡರು, ಸುರಪುರ ನಾಯಕರು ಸರ್ಕಾರಕ್ಕೆ ಬೇಡವೇ? ಬಿಜೆಪಿ ಯಾತ್ರೆಗೆ ಪ್ರತಿಯಾಗಿ ನಾವು ರಾಜ್ಯದ ಹೋರಾಟಗಾರರನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತೇವೆ ಎಂದರು.
ಬಿಜೆಪಿಗೆ ಕನ್ನಡದ ಹೋರಾಟಗಾರರು ಬೇಡ್ವಾ ? ಎಂದು ಸರ್ಕಾರ ವಿರುದ್ಧ ಅವರು ಕಿಡಿಕಾರಿದರು. ಸರ್ಕಾರಕ್ಕೆ ವಿವಾದಾತ್ಮಕ ವ್ಯಕ್ತಿಯೇ ಬೇಕಾ?, ವಿವಾದಾತ್ಮಕ ವ್ಯಕ್ತಿಯ ಫೋಟೋ ಇಟ್ಟುಕೊಂಡು ರಥಯಾತ್ರೆ ಮಾಡೋದು ಬಿ.ಎಸ್. ಯಡಿಯೂರಪ್ಪ ಅವರಿಗೆ ಶೋಭೆ ತರಲ್ಲ. ನಾವು ಕನ್ನಡ ನಾಡಿನ ಹೋರಾಟಗಾರರ ಯಾತ್ರೆಗೆ ಶೀಘ್ರದಲ್ಲಿಯೇ ದಿನ ನಿಗದಿ ಮಾಡುತ್ತೇವೆ ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ