ಶಿವಮೊಗ್ಗದಲ್ಲಿ ಆಗಸ್ಟ್ – ಸೆಪ್ಟೆಂಬರ್ ತಿಂಗಳಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್

ಹೊಸ ದಿಗಂತ ವರದಿ, ಶಿವಮೊಗ್ಗ:

ಮುಂಬರುವ ಆಗಸ್ಟ್ – ಸೆಪ್ಟೆಂಬರ್ ಮಾಹೆಯಲ್ಲಿ ಶಿವಮೊಗ್ಗದ ಕರ್ನಾಟಕ ಕ್ರಿಕೆಟ್ ಅಸೋಸಿಯೇಶನ್ ಕ್ರೀಡಾಂಗಣದಲ್ಲಿ ಕರ್ನಾಟಕ ಪ್ರೀಮಿಯರ್ ಲೀಗ್ ಆಯೋಜಿಸುವ ಗುರಿ ಹೊಂದಲಾಗಿದೆ ಎಂದು ಕೆಎಸ್ಸಿಎ ವಕ್ತಾರ ವಿಯ್ ಮೃತ್ಯುಂಜಯ ತಿಳಿಸಿದರು.
ನವುಲೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ ಕೆಪಿಎಲ್ ಆಡಿಸಲು ಕೆಎಸ್‌ಸಿಎ ಬಹಳ ವರ್ಷಗಳಿಂದ ಪ್ರಯತ್ನ ಮಾಡುತ್ತಿದೆ. ಆದರೆ ಇಲ್ಲಿನ ಹವಾಮಾನ ಅದಕ್ಕೆ ಅಡ್ಡಿಯಾಗಿದೆ. ಈ ಬಾರಿಯಾದರೂ ಪಂದ್ಯಾವಳಿ ನಡೆಸಬೇಕು ಎಂಬ ಉದ್ದೇಶ ಹೊಂದಲಾಗಿದೆ. ಅದಕ್ಕಾಗಿ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದರು.
ನವುಲೆ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಳೆಗಾಲದಲ್ಲಿ ನೀರು ನಿಲ್ಲುತ್ತಿರುವ ಸಮಸ್ಯೆ ಪರಿಹಾರಕ್ಕೆ ಯೋಜನೆ ರೂಪಿಸಲಾಗಿದೆ. ಕೆರೆ ಹೂಳು ತೆಗೆಯುವ ಯೋಜನೆಯನ್ನು ಸೂಡಾ ಕೈಗೆತ್ತಿಕೊಳ್ಳಲಿದೆ. ಅದಕ್ಕೆ ಮಂಜೂರಾತಿ ಸಹ ದೊರೆತಿದೆ. ಕ್ರೀಡಾಂಗಣ ಸುತ್ತ ಹಸಿರೀಕರಣ ಮಾಡಲಾಗುವುದು ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!