ಹೊಸ ದಿಗಂತ ವರದಿ, ಶಿವಮೊಗ್ಗ:
ಹೊಸಪೇಟೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯಕಾರಿಣಿ ಸಭೆಯ ತೀರ್ಮಾನದಂತೆ ರಾಜ್ಯಾದ್ಯಂತ ವಿವಿಧ ಸಮಾವೇಶ ನಡೆಸಲಾಗುತ್ತಿದೆ. ಶಿವಮೊಗ್ಗದಲ್ಲಿ ಮೇ 15ರಂದು ವಾಣಿಜ್ಯ ಪ್ರಕೋಷ್ಠದ ಸಮಾವೇಶ ನಡೆಸಲು ದಿನಾಂಕ ನಿಗದಿಪಡಿಸಲಾಗಿದೆ ಎಂದು ಬಿಜೆಪಿ ರಾಜ್ಯ ಸಂಚಾಲಕ ಎಂ.ಬಿ. ಭಾನುಪ್ರಕಾಶ್ ತಿಳಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಬುಧವಾರ ಸುದ್ದಿಗೋಮಾತನಾಡಿ, ಮೇ.7 ರಂದು ಸಮಾವೇಶಕ್ಕೆ ಚಾಲನೆ ನೀಡಲಾಗುತ್ತಿದೆ. ಅಂದು ತುಮಕೂರಿನಲ್ಲಿ ನೇಕಾರರ ಪ್ರಕೋಷ್ಠದ ಸಮಾವೇಶ ನಡೆಯಲಿದೆ. ರಾಜ್ಯದಲ್ಲಿ ಹಾಗೂ ಜಿಲ್ಲೆಯಲ್ಲಿ 24 ರಚಿಸಲಾಗಿದೆ. ರಾಜ್ಯದಲ್ಲಿ ಒಟ್ಟು 312 ಮಂಡಲಗಳಿವೆ. ಈ ಮಂಡಲಗಳ ಪ್ರಮುಖರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಸಮಾವೇಶ್ಕೆ ಚಾಲನೆ ನೀಡಲಿದ್ದಾರೆ. ಮೇ 31ರಂದು ಚಿಕ್ಕಮಗಳೂರಿನಲ್ಲಿ ಸಮಾವೇಶದ ಸಮಾರೋಪ ನಡೆಯಲಿದೆ ಎಂದು ತಿಳಿಸಿದರು.
ಶಿವಮೊಗ್ಗದ ಶುಭಶ್ರಿೀ ಕಲ್ಯಾಣ ಮಂದಿರದಲ್ಲಿ ಮೇ 15 ರಂದು ವಾಣಿಜ್ಯ ಸಭೆ ನಡೆಯಲಿದೆ. ಪಕ್ಷದ ಪ್ರಮುಖರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವುದು ಮತ್ತು ಸಮಸ್ಯೆ ಇದ್ದಲ್ಲಿ ಅದನ್ನು ಸರ್ಕಾರದ ಗಮನಕ್ಕೆ ತರುವ ಕಾರ್ಯವನ್ನು ಮಾಡಲಿವೆ. ಆಯಾ ಜಿಲ್ಲೆಯಲ್ಲಿನ ಗಣ್ಯರನ್ನೇ ಮುಖ್ಯಸ್ಥರನ್ನಾಗಿ ಮಾಡಲಾಗಿದೆ ಎಂದು ಹೇಳಿದರು.