ಹೊಸದಿಂತ ಡಿಜಿಟಲ್ ಡೆಸ್ಕ್:
ಇದೀಗ ಮತ್ತೆ ಕಾವೇರಿ ನೀರಿನ ವಿಚಾರ ಮುನ್ನೆಲೆಗೆ ಬಂದಿದೆ. ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ರಾಜ್ಯದ ರೈತರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.
ನಿನ್ನೆಯಷ್ಟೇ ದಶಪಥ ಹೆದ್ದಾರಿ ತಡೆದು ರೈತರು ಪ್ರತಿಭಟಿಸಿದ್ದು, ಇಂದು ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ಕಾವೇರಿ ನದಿಗೆ ಇಳಿದು ಪ್ರತಿಭಟನೆ ನಡೆಸಿದ್ದಾರೆ.
ಮಂಡ್ಯದ ರೈತರು ಕಾವೇರಿ ವಿಷಯವನ್ನು ಹಗುರವಾಗಿ ತೆಗೆದುಕೊಳ್ಳಲು ಆಗುವುದಿಲ್ಲ, ನಮ್ಮ ಒಡಲೇ ತುಂಬದಿದ್ದಾಗ ಇನ್ನೊಬ್ಬರ ಬಗ್ಗೆ ಯೋಚನೆ ಹೇಗೆ ಮಾಡುವುದು ಎನ್ನುತ್ತಿದ್ದಾರೆ.
ರಾಜ್ಯದಲ್ಲಿ ವಾಡಿಕೆಯಷ್ಟು ಮಳೆಯಾಗದ ಕಾರಣ ಕೆಆರ್ಎಸ್ ಡ್ಯಾಂ ಭರ್ತಿಯಾಗಿಲ್ಲ. ಆದರೂ ತಮಿಳುನಾಡಿಗೆ ನೀರು ಹರಿಸಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿದೆ.