ಕಾಫಿ ತೋಟದಲ್ಲಿ ವಿದ್ಯುತ್ ಸ್ಪರ್ಶಿಸಿ ಕಾಡಾನೆ ಸಾವು

 ಹೊಸ ದಿಗಂತ ವರದಿ, ಮಡಿಕೇರಿ:

ವಿದ್ಯುತ್ ಸ್ಪರ್ಶಿಸಿ ಗಂಡಾನೆ ಸಾವಿಗೀಡಾದ ಘಟನೆ ಸಿದ್ದಾಪುರ ಸಮೀಪದ ಅತ್ತಿಮಂಗಲ ಗ್ರಾಮದಲ್ಲಿ ನಡೆದಿದೆ.
ಅತ್ತಿಮಂಗಲ ಗ್ರಾಮದ ವಿವೇಕ್ ಅಪ್ಪಯ್ಯ ಎಂಬವರಿಗೆ ಸೇರಿದ ಕಾಫಿ ತೋಟದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಗಾಳಿ-ಮಳೆಗೆ ಕಂಬ ಮುರಿದು ವಿದ್ಯುತ್ ತಂತಿ ನೇತಾಡಿದ್ದು, ಇದನ್ನು ಸ್ಪರ್ಶಿಸಿದ ಸುಮಾರು 22 ವರ್ಷದ ಗಂಡಾನೆ ಸ್ಥಳದಲ್ಲೇ ಒದ್ದಾಡಿ ಮೃತಪಟ್ಟಿದೆ.
ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಪಶುವೈದ್ಯ ಡಾ. ಚಿಟ್ಟಿಯಪ್ಪ ಅವರ ನೇತೃತ್ವದಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!