ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಪಕ್ಷ ಸಂಪೂರ್ಣ ಬಹುಮತ ಪಡೆದು ಸ್ವಂತ ಬಲದಿಂದ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಶನಿವಾರ ವಿಶ್ವಾಸ ವ್ಯಕ್ತಪಡಿಸಿದರು. ಕರ್ನಾಟಕದ ಹಿತದೃಷ್ಟಿಯಿಂದ ತಂದೆ ಮುಖ್ಯಮಂತ್ರಿಯಾಗಬೇಕು ಎಂಬ ಆಶಾಭಾವನೆಯನ್ನು ಹೊರಹಾಕಿದರು.
“ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ನಾವು ಏನು ಬೇಕಾದರೂ ಮಾಡುತ್ತೇವೆ.. ಕರ್ನಾಟಕದ ಹಿತದೃಷ್ಟಿಯಿಂದ ನನ್ನ ತಂದೆ ಮುಖ್ಯಮಂತ್ರಿಯಾಗಬೇಕು”. ಬುಧವಾರ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಹೊಂದುವ ನಿರೀಕ್ಷೆಯಿದೆ, ಎಕ್ಸಿಟ್ ಪೋಲ್ಗಳು ಪೂರ್ಣ ಬಹುಮತವನ್ನು ನೀಡಿವೆ ಎಂದರು.