ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾರಾಷ್ಟ್ರದ ಅಕೋಲಾ ಜಿಲ್ಲೆಯ ಬಾಲಾಪುರ್ ತೆಹಸಿಲ್ನ ಪಾರಸ್ ಗ್ರಾಮದ ದೇವಸ್ಥಾನದಲ್ಲಿ ದುರ್ಘಟನೆ ಸಂಭವಿಸಿದೆ.
ದೇಗುಲದ ಶೆಡ್ ಮೇಲೆ ಬೃಹತ್ ಗಾತ್ರದ ಬೇವಿನ ಮರ ಬಿದ್ದಿದ್ದು, ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 30 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಕೋಲಾ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಬಾಬುಜಿ ಮಹಾರಾಜ್ ಮಂದಿರದ ಶೆಡ್ ಮೇಲೆ ಬೃಹತ್ ಬೇವಿನ ಮರ ಬಿದ್ದಿದೆ. ಸ್ಥಳೀಯರು ತಕ್ಷಣ ಓಡಿಬಂದು ಶೆಡ್ ಅಡಿ ಸಿಲುಕಿದ್ದವರ ರಕ್ಷಣೆಗೆ ಮುಂದಾಗಿದ್ದಾರೆ.
ತಕ್ಷಣವೇ ಪೊಲೀಸರು, ಆಂಬುಲೆನ್ಸ್ ತಂಡ ಸ್ಥಳಕ್ಕೆ ತಲುಪಿದ್ದು,ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.