ರಾಜ್ಯದಲ್ಲಿ ಶೇ.40 ರಷ್ಟು ಕಮಿಷನ್ ಸತ್ಯಕ್ಕೆ ದೂರ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್

ಹೊಸ ದಿಗಂತ ವರದಿ, ಹುಬ್ಬಳ್ಳಿ:

ರಾಜ್ಯದಲ್ಲಿ ಶೇ.40 ರಷ್ಟು ಕಮಿಷನ್ ಸತ್ಯಕ್ಕೆ ದೂರವಾಗಿದೆ. ಕಾಂಗ್ರೆಸ್ ಮತ್ತು ಅದರ ನಾಯಕರು ಷಡ್ಯಂತ್ರ ನಡೆಸುತ್ತಿದ್ದು, ಅವರು ಅದರಲ್ಲಿ ಬದುಕುತ್ತಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರ ಮೇಲಿನ ಆರೋಪ ಸುಳ್ಳು ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ಹೇಳಿದರು.

ಈಶ್ವರಪ್ಪ ಅವರ ಮೇಲಿನ ಆರೋಪ ಸುಳ್ಳು
ನಗರದ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶೇ.40 ರಷ್ಟು ಕಮಿಷನ್ ಅನ್ನುವುದೇ ಗೊಂದಲದ ವಿಷಯ. ಈ ವಿಚಾರವನ್ನು ನಿಟ್ಟಿಕೊಂಡು ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಆ ಆರೋಪ ಸತ್ಯವಲ್ಲ. ಕೆಪಿಸಿಸಿ ಮುಖಂಡರೊಬ್ಬರು ಕೆ.ಎಸ್. ಈಶ್ವರಪ್ಪ ಅವರ ಆರೋಪ ಪ್ರಕರಣದ ಹಿಂದಿದ್ದಾರೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಸತ್ಯ ಹೊರ ಬೀಳಲಿದೆ.

ಗುತ್ತಿಗೆದಾರರ ಆರೋಪದ ಹಿಂದೆಯೂ ಕಾಂಗ್ರೆಸ್ ಕೈವಾಡವಿದೆ. ರಾಜ್ಯದ ಜನತೆಗೂ ಸತ್ಯ ಏನೆಂದು ತಿಳಿದಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದ್ದು, ಸತ್ಯ ಬಹಿರಂಗವಾಗಲಿದೆ. ಕಾಂಗ್ರೆಸ್ ಜನರ ನಡುವೆ ಹೋಗುವುದಿಲ್ಲ. ಯಾವ ಅಭಿವೃದ್ಧಿ ಕೆಲಸಕ್ಕೂ ಕೈ ಜೋಡಿಸುವುದಿಲ್ಲ. ಅವರ ಎಲ್ಲ ಮುಖಂಡರು ಸಹ ಷಡ್ಯಂತ್ರ ನಡೆಸುವುದ ರಲ್ಲಿಯೇ ಕಾಲ ಕಳೆಯುತ್ತಾರೆ ಎಂದು ಆರೋಪಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!