ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ನಗರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಆಯನೂರು ಮಂಜುನಾಥ್, ರಾಜ್ಯದಲ್ಲಿ ಹೊಸ ಇತಿಹಾಸದ ಪುಟ ತೆರೆಯಲಿದೆ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.
ಗುರುವಾರ ಮಾಧ್ಯಮಗಳ ಜೊತೆ ಮಾತನಾಡಿದ ಆಯನೂರು ಮಂಜುನಾಥ್, ರಾಜ್ಯದಲ್ಲಿ ಈ ಬಾರಿ ಅತಂತ್ರ ಫಲಿತಾಂಶ ಬರಲಿದೆ. ಸರ್ಕಾರ ರಚನೆಯಲ್ಲಿ ಜೆಡಿಎಸ್ ಪಕ್ಷ ಪ್ರಮುಖ ಪಾತ್ರ ವಹಿಸಲಿದೆ. ಶಿವಮೊಗ್ಗ ನಗರದಲ್ಲಿ ಜೆಡಿಎಸ್ ಗೆದ್ದು ಇತಿಹಾಸ ಸೃಷ್ಟಿ ಮಾಡಲಿದೆ. ಶಾಂತಿ, ಸೌಹಾರ್ದತೆ, ಅಭಿವೃದ್ಧಿ ಮೇಲೆ ಚುನಾವಣೆ ಮಾಡಿದ್ದೇವೆ ಎಂದರು.
ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರು ನನಗೆ ಸಹಾಯ ಮಾಡಿದ್ದಾರೆ. ಹೊಸ ಇತಿಹಾಸದ ಪುಟ ತೆರೆಯುವ ವಿಶ್ವಾಸವಿದೆ ಎಂದರು.