ಮುಂಬರುವ ಚುನಾವಣೆಯಲ್ಲಿ ಮತ್ತೆ ಜೆಡಿಎಸ್‌ ಅಧಿಕಾರಕ್ಕೆ: ಹೆಚ್ ಡಿಕೆ ವಿಶ್ವಾಸ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಮ್ಮದೇ ಸರ್ಕಾರ ಬರುತ್ತದೆ. ನಾನೇ ಮಳವಳ್ಳಿಯ ಬಸವ ಭವನಕ್ಕೆ ಒಂದು ಕೋಟಿ ಅನುದಾನ ಕೊಡುತ್ತೇನೆ ಎನ್ನುವ ಮೂಲಕ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.

ಮಂಡ್ಯದಲ್ಲಿ ಮಾತನಾಡಿದ ಅವರು, ಈಗ ನನಗೆ ಬಸವ ಭವನಕ್ಕೆ ಅನುದಾನ ಕೊಡುವ ಅಧಿಕಾರ ಇಲ್ಲ. ಮುಂದೆ ನಮ್ಮದೇ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಆಗ ನಾನೇ ಒಂದು ಕೋಟಿ ಅನುದಾನ ನೀಡುತ್ತೇನೆ ಎಂದು ಲಿಂಗಾಯತ ಸಮುದಾಯದ ಮುಖಂಡರಿಗೆ ಭರವಸೆ ನೀಡಿದ್ದಾರೆ.

ಅನ್ನದಾನಿ ಕ್ಷೇತ್ರದ ಸಮಸ್ಯೆಗಳಿಗೆ ಪ್ರಾಮಾಣಿಕ ಕೆಲಸ ಮಾಡುತ್ತಿದ್ದಾರೆ, ಅನ್ನದಾನಿ ಕಾರ್ಯಕ್ಕೆ ನನ್ನ ಮೆಚ್ಚುಗೆ ಇದೆ. ದೇವೇಗೌಡರ ಅನುದಾನದಲ್ಲಿ 25 ಲಕ್ಷ ಬಿಡುಗಡೆಗೆ ಪತ್ರ ನೀಡುತ್ತೇನೆ ಎಂದು ತಿಳಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!