ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟರ್ಕಿ ಭೂಕಂಪದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ರಕ್ಷಿಸಲು ವಿದೇಶಾಂಗ ಇಲಾಖೆ ಜತೆಗೆ ನಿರಂತರ ಸಂಪರ್ಕ ಮಾಡಲಾಗುತ್ತಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ವಿದೇಶಾಂಗ ಇಲಾಖೆ ವಿಶೇಷ ಹೆಲ್ಪ್ಲೈನ್ ಪ್ರಾರಂಭಿಸುತ್ತಿದ್ದು, ಆ ಮೂಲಕ ಕನ್ನಡಿಗರ ಮಾಹಿತಿ ಪಡೆದುಕೊಳ್ಳಲಾಗುವುದು. ಜತೆಗೆ ಟರ್ಕಿ ರಾಯಭಾರ ಕಚೇರಿ ಜತೆಗೂ ನಮ್ಮ ಅಧಿಕಾರಿಗಳು ಸಂಪರ್ಕ ಪಡೆದು ಅಲ್ಲಿ ಕನ್ನಡಿಗರು ಯಾರೆಲ್ಲ ಇದ್ದಾರೆಂದು ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದರು.
ಬೆಂಗಳೂರಿನಲ್ಲಿ ಸರ್ಕಾರ ಈ ಸಂಬಂಧ ಹೆಲ್ಪ್ಲೈನ್ ಪ್ರಾರಂಭಿಸಲಾಗುವುದು, ಜನರು ತಮ್ಮ ಬಂಧು-ಬಳಗದವರು ಯಾರಿದ್ದಾರೆ ಎಂಬ ಬಗ್ಗೆ ಮಾಹಿತಿ ಹಂಚಿಕೊಂಡರೆ ಅವರನ್ನೆಲ್ಲ ಸ್ವದೇಶಕ್ಕೆ ಕರೆತರಲು ಪ್ರಯತ್ನಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಭರವಸೆ ನೀಡಿದರು.