ಉದಯಪುರದಲ್ಲಿ ಕಟ್ಟೆಚ್ಚರ: ಇಂಟರ್ನೆಟ್ ಬಂದ್, ಕರ್ಫ್ಯೂ , ಸೆಕ್ಷನ್ 144 ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಿಜೆಪಿ ಮಾಜಿ ವಕ್ತಾರೆ ನೂರುಪ್ ಶರ್ಮಾ ಹೇಳಿಕೆ ಬೆಂಬಲಿಸಿದರು ಎಂಬ ಕಾರಣಕ್ಕೆ ವ್ಯಕ್ತಿಯೋರ್ವರ ಶಿರಚ್ಛೇದ ನಡೆಸಿರುವ ಘಟನೆ ಬಳಿಕ ಧಗಧಗಿಸುತ್ತಿರುವ ಉದಯುಪುರದಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಹೇರಲಾಗಿರುವ ಕರ್ಫ್ಯೂ – ಮುಂದುವರಿದಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಕಣ್ಗಾವಲಿರಿಸಲಾಗಿದೆ.
ಈ ನಡುವೆ ಮುಮದಿನ 24 ಗಂಟೆಗಳ ಕಾಲ ಇಂಟರ್ನೆಟ್ ಸೇವೆಗಳನ್ನು ಕೂಡಾ ಬಂದ್ ಮಾಡಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗುವ ಪೋಸ್ಟ್‌ಗಳ ಮೇಲೆಯೂ ನಿಗಾ ಇರಿಸಲಾಗಿದೆ. ಮುಂದಿನ  30 ದಿನಗಳ ಕಾಲ ರಾಜ್ಯದಾದ್ಯಂತ ಸೆಕ್ಷನ್ 144 ಜಾರಿಗೊಳಿಸಿ ಈಗಾಗಲೇ ರಾಜಸ್ಥಾನ ರಾಜ್ಯದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!