ಹೊಸದಿಗಂತ ಡಿಜಿಟಲ್ ಡೆಸ್ಕ್:
ಉದಯಗಿರಿ ಗಲಭೆ ನಡೆದ ದಿನ ನಾನು ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದ್ದೇನೆಯೇ ಹೊರತು ಪ್ರಚೋದನೆ ನೀಡಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬ್ಬ ಮುಲ್ಲಾ ಪ್ರಚೋದನೆ ಮಾಡಿದ್ರೂ ಯಾಕೆ ಅರೆಸ್ಟ್ ಮಾಡಿಲ್ಲ ಅಂತ ಕೇಳಿದ್ದೇನೆ. ಮುಸ್ಲಿಮರು ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಅಂದಿದ್ದೇನೆ ಇದು ಪ್ರಚೋದನಕಾರಿನಾ? ಪ್ರಶ್ನೆ ಮಾಡಿದ್ದಾರೆ.
ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ಗೆ ಸಂಬಂಧ ಪ್ರತಿಕ್ರಿಯೆ ನೀಡಿದ ಅವರು, ಪೊಲೀಸ್ ಠಾಣೆಗೆ ಭೇಟಿ ನೀಡಿ ಪೊಲೀಸರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಿದೆವು. ಇದು ಪ್ರಚೋದನಕಾರಿಯಾ? ಸಿದ್ದರಾಮಯ್ಯ ಸರ್ಕಾರ ಬಂದ ನಂತರ ನನ್ನ ಮೇಲೆ ಹಲವು ಎಫ್ಐಆರ್ (FIR) ಮಾಡಿದ್ದಾರೆ. ಈಗ ಉದಯಗಿರಿ ಠಾಣೆಯಲ್ಲಿ ಆಗಿದೆ. ಈ ರೀತಿ ಸಾಲು ಸಾಲು ಎಫ್ಐಆರ್ ಹಾಕಿ ಆತ್ಮಸ್ಥೈರ್ಯ ಕುಗ್ಗಿಸಬೇಕು, ಮನೆಯಿಂದ ಹೊರಬರಬಾರದು ಅಂತ ಉದ್ದೇಶದಿಂದ ಮಾಡ್ತಾ ಇದ್ದಾರೆ ಎಂದು ಕಿಡಿ ಕಾರಿದರು.
ಮುಸ್ಲಿಮರು ಪುರುಸೊತ್ತಿಲ್ಲದೇ ಮಕ್ಕಳು ಹುಟ್ಟಿಸುತ್ತಾರೆ ಅಂದಿದ್ದೇನೆ ಇದು ಪ್ರಚೋದನಕಾರಿನಾ? ಅವರ ಜನಸಂಖ್ಯೆ ನೋಡಿದ್ರೆ ಗೊತ್ತಾಗುತ್ತೆ. ನಿಮ್ಮ ಮನೆಯಲ್ಲಿ 1-2 ಮಕ್ಕಳಿರೋ ಎಷ್ಟು ಜನ ಇದ್ದಾರೆ ಹೇಳಿ. ನಾನು ಸತ್ಯ ಹೇಳಿದ್ದೇನೆ. ಶಾರುಖ್ ಖಾನ್ಗೆ ಮೂರು ಮಕ್ಕಳಿದ್ದಾರೆ. ಸೈಫ್ ಅಲಿ ಖಾನ್ಗೆ 4 ಮಕ್ಕಳಿದ್ದಾರೆ, ನಿಮ್ಮ ಸೆಲೆಬ್ರಿಟಿಗಳೇ ಕಂಟ್ರೋಲ್ ಇಲ್ಲದೆ ಮಕ್ಕಳು ಹುಟ್ಟಿಸುತ್ತಿದ್ದಾರೆ. ಜನೋತ್ಪಾದನೆಯಲ್ಲಿ ತೊಡಗಿದ್ದೀರಿ ಎಂದು ಹೇಳಿದ್ದೇನೆ. ಮುಸ್ಲಿಮರು ಮಕ್ಕಳನ್ನ ದೇವರು ಕೊಟ್ಟ ಅಂತ ಹೇಳ್ತೀರಾ.. ನಿಮ್ಮಮಕ್ಕಳನ್ನ ದೇವರೆ ನೋಡಿಕೊಳ್ಳಲಿ. ಸರ್ಕಾರ ಯಾಕೆ ನೋಡಿಕೊಳ್ಳಬೇಕು? ಸರ್ಕಾರ ಯಾಕೆ ಪುಕ್ಕಟೆ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.