ವರುಣಾ ಕ್ಷೇತ್ರದಲ್ಲಿ ಬಿಗುವಿನ ವಾತಾವರಣ: ಸಚಿವ ಸೋಮಣ್ಣ ಕಾರಿಗೆ ಸಿದ್ದು ಅಭಿಮಾನಿಗಳಿಂದ ಮುತ್ತಿಗೆ

ಹೊಸದಿಗಂತ ವರದಿ ಮೈಸೂರು:

ವಿಧಾನಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿರುವ ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಚುನಾವಣಾ ಪ್ರಚಾರ ನಡೆಸಲು ಹೋಗಿದ್ದ ಬಿಜೆಪಿ ಅಭ್ಯರ್ಥಿಯಾದ ಸಚಿವ ವಿ.ಸೋಮಣ್ಣ ಅವರ ಕಾರಿಗೆ ಸಿದ್ದರಾಮಯ್ಯ ಪರ ಅಭಿಮಾನಿಗಳು ಮುತ್ತಿಗೆ ಹಾಕಿ ಘೋಷಣೆಗಳನ್ನು ಕೂಗಿದ ಘಟನೆ ಮೈಸೂರಿನ ಬುಗತಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದಿದೆ.

ಸೋಮಣ್ಣ ಗ್ರಾಮದಲ್ಲಿ ಪ್ರಚಾರಕ್ಕೆ ಬಂದು ಭಾಷಣ ಆರಂಭಿಸುತ್ತಿದ್ದಂತೆ ಸಿದ್ದರಾಮಯ್ಯ ಅಭಿಮಾನಿಗಳು ಅದಕ್ಕೆ ಅಡ್ಡಿಪಡಿದರು. ಮೊದಲು ನನ್ನ ಭಾಷಣವನ್ನು ಕೇಳಿ ಆನಂತರ ನೀವು ಮಾತನಾಡಿ ಎಂದು ಸೋಮಣ್ಣ ಮನವಿ ಮಾಡಿದರೂ ಸಿದ್ದರಾಮಯ್ಯನ ಅಭಿಮಾನಿಗಳು ಕಿವಿಗೆ ಹಾಕಿಕೊಳ್ಳದೆ ಸಿದ್ದರಾಮಯ್ಯ ಪರ ಘೋಷಣೆಗಳನ್ನು ಕೂಗಿದರು. ಮತ್ತೊಂದೆಡೆ ಬಿಜೆಪಿ ಅಭಿಮಾನಿಗಳು ಕೂಡಾ ವಿ. ಸೋಮಣ್ಣನವರ ಪರ ಘೋಷಣೆಗಳನ್ನು ಕೂಗಿದರು. ಇದರಿಂದಾಗಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಯಿತು. ಎಚ್ಚೆತ್ತ ಸ್ಥಳದಲ್ಲಿದ್ದ ಪೋಲಿಸರು ಎರಡು ಗುಂಪುಗಳನ್ನು ಚದುರಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ನಂತರ ಪೊಲೀಸರ ಬೆಂಗಾವಲ್ಲಿ ಸೋಮಣ್ಣ ಗ್ರಾಮದಿಂದ ತೆರಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!