ಮಾರ್ಚ್ 27 ರಂದು ಅಂಬರೀಶ್ ಸ್ಮಾರಕ ಉದ್ಘಾಟನೆ: ಸಿಎಂ ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾರ್ಚ್ 27 ರಂದು ರೆಬಲ್ ಸ್ಟಾರ್ ಅಂಬರೀಶ್ (Ambarish) ಅವರ ಸ್ಮಾರಕವನ್ನು (memorial) ಲೋಕಾರ್ಪಣೆ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದ್ದಾರೆ.

ಬೆಂಗಳೂರಿನಲ್ಲಿಮಾತನಾಡಿದ ಅವರು, ‘ನನ್ನ ನೆಚ್ಚಿನ ಗೆಳೆಯ ಅಂಬರೀಶ್ ಅವರ ಸ್ಮಾರಕವನ್ನು ಇದೇ ಮಾರ್ಚ್ 27ಕ್ಕೆ ಉದ್ಘಾಟನೆ ಮಾಡಲಿದ್ದೇನೆ’ ಎಂದು ಘೋಷಿಸಿದರು.

ಕೇವಲ ಸ್ಮಾರಕ ಮಾತ್ರವಲ್ಲ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಗೆ ಅಂಬರೀಶ್ ಅವರ ಹೆಸರನ್ನು ಅಂದೇ ಇಡುವುದಾಗಿಯೂ ತಿಳಿಸಿದರು. ‘ಅಂಬರೀಶ್ ಗೆ ರೇಸ್ ಕೋರ್ಸ್ ರಸ್ತೆ ಅಂದರೆ ತುಂಬಾ ಇಷ್ಟ. ಸದಾ ಪ್ರತಿಷ್ಠಿತ ಹೋಟೆಲ್ ನಲ್ಲಿ ವಾಸ್ತವ್ಯ ಹೂಡುತ್ತಿದ್ದ. ಗೆಳೆಯರ ಹೆಸರು ಗೊತ್ತಿರುತ್ತಿತ್ತೋ ಇಲ್ಲವೋ, ಕುದುರೆ ಹೆಸರು ಮಾತ್ರ ಗೊತ್ತಿರುತ್ತಿತ್ತು’ ಎಂದು ಸಿಎಂ ತಮಾಷೆಯಾಗಿ ಅಂಬರೀಶ್ ಅವರನ್ನು ನೆನಪಿಸಿಕೊಂಡರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!