ಹೊಸದಿಗಂತ ವರದಿ, ಮಂಗಳೂರು
ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ವೈಜ್ಞಾನಿಕ ಪ್ರಯೋಗಗಳಿಗೆ ಅನುಕೂಲವಾಗುವಂತೆ ಕ್ಯಾಪ್ಸ್ ಫೌಂಡೇಶನ್ ಅಧ್ಯಕ್ಷ ಚಂದ್ರಶೇಖರ್ ಶೆಟ್ಟಿ ಕೊಡುಗೆಯಾಗಿ ನೀಡಿರುವ “ವಿಜ್ಞಾನವನ” ಲೋಕಾರ್ಪಣೆಗೊಂಡಿದೆ.
ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷ ಸುದರ್ಶನ ಎಂ. ಭಾಗವಹಿಸಿದರು.
ಶ್ರೀ ವಾಸುದೇವ ಅಸ್ರಣ್ಣರು, ಶ್ರೀ ಅನಂತಪದ್ಮನಾಭ ಅಸ್ರಣ್ಣರು, ಶ್ರೀ ಹರಿನಾರಾಯಣ ಅಸ್ರಣ್ಣರು, ಶಾಸಕರಾದ ಉಮನಾಥ್ ಕೋಟ್ಯಾನ್, ಪ್ರಮುಖರಾದ ಸನತ್ ಕುಮಾರ್ ಶೆಟ್ಟಿ, ನೀರೇಂದ್ರ, ಈಶ್ವರ್ ಕಟೀಲ್, ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತರಿದ್ದರು.