ನೂತನ ಸಂಸತ್‌ ಭವನ ಉದ್ಘಾಟನೆ: ರಾಜದಂಡ ಸೆಂಗೋಲ್​ ಪ್ರತಿಷ್ಠಾಪಿಸಿದ ಪ್ರಧಾನಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೊಸ ಸಂಸತ್​ ಭವನದ ಉದ್ಘಾಟನಾ ಕಾರ್ಯಕ್ರಮ ಇಂದು ನಡೆಯುತ್ತಿದ್ದು, ಐತಿಹಾಸಿಕ ರಾಜದಂಡ ಸೆಂಗೋಲ್​ ಅನ್ನು ಲೋಕಸಭಾ ಸ್ಪೀಕರ್​ ಸ್ಥಾನದ ಹಿಂಭಾಗದಲ್ಲಿ ಪ್ರಧಾನಿ ಮೋದಿ ಪ್ರತಿಷ್ಠಾಪಿಸಿದ್ದಾರೆ.

ಪೂಜಾ ವಿಧಿವಿಧಾನಗಳ ಬಳಿಕ ಅಧೀನಂ ಶ್ರೀಗಳಿಂದ ಸೆಂಗೋಲ್​ ಅನ್ನು ಸ್ವೀಕರಿಸಿದ ಪ್ರಧಾನಿ ಮೋದಿ, ಲೋಕಸಭಾ ಸ್ಪೀಕರ್​ ಸ್ಥಾನದ ಹಿಂದೆ ಅಳವಡಿಸಿದ್ದಾರೆ. ಸೆಂಗೋಲ್, ಬ್ರಿಟಿಷರಿಂದ ಸ್ವತಂತ್ರ ಭಾರತಕ್ಕೆ ಅಧಿಕಾರದ ಹಸ್ತಾಂತರವನ್ನು ಸಂಕೇತಿಸುತ್ತದೆ. ಅಧಿಕಾರದ ಹಸ್ತಾಂತರಕ್ಕೆ ಸೆಂಗೋಲ್ ಅಥವಾ ರಾಜದಂಡವನ್ನು ಸಿದ್ಧಪಡಿಸುವ ಜವಬ್ದಾರಿಯನ್ನು ತಿರುವವಾಡುತುರೈ ಅಧೀನಮ್​ ಅಥವಾ ಮಠಕ್ಕೆ ನೀಡಲಾಗಿತ್ತು. ಈ ಅಧೀನಮ್​ 400 ವರ್ಷಗಳಷ್ಟು ಹಳೆಯದ್ದಾಗಿದೆ.

ಇಂದು ಉದ್ಘಾಟನಾ ಕಾರ್ಯಕ್ರಮಕ್ಕೆ ಸುಮಾರು 60 ಧಾರ್ಮಿಕ ಮುಖ್ಯಸ್ಥರನ್ನು ಕರೆಸಲಾಗಿದ್ದು, ಅವರಲ್ಲಿ ಹಲವರು ತಮಿಳುನಾಡಿನವರಾಗಿದ್ದಾರೆ. ಧಾರ್ವಿುಕ ಕಾರ್ಯಕ್ರಮದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದ ಋತ್ವಿಜರಾದ ಟಿ.ವಿ. ಸೀತಾರಾಮ ಶರ್ಮ, ಶ್ರೀರಾಮ ಶರ್ಮ, ಲಕ್ಷ್ಮೀಶ ತಂತ್ರಿ ಹಾಗೂ ದೆಹಲಿ ಶಾಖಾ ಮಠದ ನಾಗರಾಜ ಅಡಿಗ, ಋಷ್ಯಶೃಂಗ ಭಟ್ ಭಾಗಿಯಾಗಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!