ಚಿಕ್ಕಮಗಳೂರಿನಲ್ಲಿ ನಿರಂತರ ಮಳೆ: ಕಳಸ-ಕುದುರೆಮುಖ-ಮಂಗಳೂರು ಹೆದ್ದಾರಿಯಲ್ಲಿ ಬಿರುಕು

ಹೊಸದಿಗಂತ ಡಿಜಿಟಲ್ ಡೆಸ್ಕ್ :

ಕಳೆದ ಕೆಲವು ದಿನಗಳಿಂದ ಮಳೆಯ ಪ್ರಮಾಣ ಜೋರಾಗಿದ್ದು, ಕಾಫಿನಾಡು ಚಿಕ್ಕಮಗಳೂರಿನಲ್ಲಿಯೂ ನಿರಂತರ ಮಳೆಯಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಹಾದು ಹೋಗುವ ಕಳಸ-ಕುದುರೆಮುಖ-ಮಂಗಳೂರು ಸಂಪರ್ಕಿಸುವ ಹೆದ್ದಾರಿಯಲ್ಲಿ ಬಿರುಕು ಕಂಡುಬಂದಿದ್ದು, ಗುಡ್ಡ ಕುಸಿತದ ಆತಂಕ ಎದುರಾಗಿದೆ.

ಕಳಸದಿಂದ 1 ಕಿ.ಮೀ. ದೂರದಲ್ಲಿ ರಸ್ತೆ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರಿಗೆ ಆತಂಕ ಎದುರಾಗಿದೆ. ಕಳೆದ ವರ್ಷ ರಸ್ತೆ ಕುಸಿತ ಕಂಡಿದ್ದ ಸ್ಥಳದಲ್ಲಿಯೇ ಈ ವರ್ಷವೂ ಕೂಡ ರಸ್ತೆ ಬಿರುಕು ಕಾಣಿಸಿಕೊಂಡಿದೆ. ಇನ್ನು ರಸ್ತೆ ಕುಸಿಯದಂತೆ ಗೋಡೆ (ವಾಲ್) ನಿರ್ಮಾಣ ಮಾಡಲಾಗಿತ್ತು. ಆದರೆ, ಈಗ ಕಾಮಗಾರಿ ನಡೆದ ಸ್ಥಳದ ರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಗೋಡೆ ಸಮೇತವೇ ಕುಸಿಯುವ ಆತಂಕ ಎದುರಾಗಿದೆ.

ರಸ್ತೆಯ ಪಕ್ಕದಲ್ಲಿ ಮಣ್ಣು ಕುಸಿಯದಂತೆ ನಿರ್ಮಿಸಿದ ಗೋಡೆಯೇ ಈಗ ಕುಸಿಯುತ್ತಿದೆ. ಒಂದು ವೇಳೆ ತಡೆಗೋಡೆ ಕುಸಿತ ಉಂಟಾದಲ್ಲಿ ರಸ್ತೆ ಕುಸಿಯುವ ಭೀತಿ ಎದುರಾಗಿದೆ. ಇನ್ನು ರಸ್ತೆ ಬಿರುಕಿನಿಂದ ವಾಹನ ಸವಾರರಲ್ಲಿ ಆತಂಕ ಎದುರಾಗಿದೆ. ಕಳಸ- ಕುದುರೆಮುಖ- ಮಂಗಳೂರು ಸಂಪರ್ಕಿಸುವ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಚಿಕ್ಕಮಗಳೂರು ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!