ರಾಜಧಾನಿ ಬೆಂಗಳೂರಿನಲ್ಲಿ ನಿಲ್ಲದ ಮಳೆ, ಇನ್ನೂ ಆರು ದಿನ ಇದೇ ಕಥೆ, Yellow Alert ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆಯಾಗುತ್ತಿದೆ, ಅಕ್ಟೋಬರ್ 28ರವರೆಗೂ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಅಷ್ಟೇ ಅಲ್ಲದೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್​​ ಘೋಷಿಸಲಾಗಿದೆ.

ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲೂ ಮಳೆಯಾಗಲಿದೆ. ಕದ್ರಾ, ಕುಂದಾಪುರ, ಮುಂಡಗೋಡು, ಹಿರೇಕೆರೂರು, ಹೊನ್ನಾಳಿ, ಕಾರವಾರ, ಶಿವಮೊಗ್ಗ, ಚಿತ್ರದುರ್ಗ, ಆನವಟ್ಟಿಯಲ್ಲಿ ಮಳೆಯಾಗಿದೆ. ಕಿರವತ್ತಿ, ಹೊನ್ನಾವರ, ಹುಂಚದಕಟ್ಟೆ, ಶ್ರವಣಬೆಳಗೊಳ, ದಾವಣಗೆರೆ, ಕುಣಿಗಲ್, ಕೃಷಗಣರಾಜಸಾಗರ, ಬನವಾಸಿ, ಜಯಪುರ, ಶ್ರೀರಂಗಪಟ್ಟಣ, ತರೀಕೆರೆ, ನಾಯಕನಹಟ್ಟಿ, ಎನ್​ಆರ್​ಪುರ, ತರೀಕೆರೆ, ಗೇರುಸೊಪ್ಪ, ಗೋಕರ್ಣದಲ್ಲಿ ಮಳೆಯಾಗಿದೆ.

ಕೊಪ್ಪ, ಹಡಗಲಿ, ಶಿರಾಲಿ, ಅಂಕೋಲಾ, ಕೋಟ, ಲೋಂಡಾ, ತಿಪಟೂರು, ಬೆಳ್ಳಟ್ಟಿ, ನಾಪೋಕ್ಲು, ಹೆಸರಘಟ್ಟ, ಚಿಕ್ಕಮಗಳೂರು, ಮಾಗಡಿ, ಅಜ್ಜಂಪುರ, ಕಳಸ, ಕೃಷ್ಣರಾಜಪೇಟೆ, ಕಾರ್ಕಳ, ಸಂಡೂರು, ಹೊಸದುರ್ಗ, ರಾಮನಗರ, ಹರಪನಹಳ್ಳಿ, ಸೇಡಬಾಳ, ಲಕ್ಷ್ಮೇಶ್ವರ, ಕುಂದಗೋಳದಲ್ಲಿ ಮಳೆಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!