ಉಡುಪಿಯಲ್ಲಿ ನಿರಂತರ ಮಳೆ: ಈ ಎರಡು ತಾಲೂಕಿನ ಶಾಲೆ, ಪಿಯು ಕಾಲೇಜಿಗೆ ನಾಳೆ ರಜೆ ಘೋಷಣೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗುವುದರಿಂದ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ನಾಳೆ ಉಡುಪಿ ಜಿಲ್ಲೆಯ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಹಾಗೂ ಪ್ರಾಥಮಿಕ, ಪ್ರೌಢ ಶಾಲೆ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್, ಐ.ಟಿ.ಐ ಗಳಿಗೆ ರಜೆ, ಘೋಷಿಸಿರುವುದಿಲ್ಲ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತೆ ರಶ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!