April 26, 2026
Sunday, April 26, 2026
spot_img

ಜಾತಿ ಜನಗಣತಿಯಲ್ಲಿ ಪಂಚಮಸಾಲಿಗಳೆಂದು ನಮೂದಿಸಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಾತಿ ಜನಗಣತಿಯಲ್ಲಿ ಪಂಚಮಸಾಲಿಗಳೆಂದು ನಮೂದಿಸಿ, ಕಾಲಂ ನಂಬರ್ 0868 ಎಂದು ಇರಲಿದೆ. ಅದರಲ್ಲಿ ಪಂಚಮಸಾಲಿ ಸಮಾಜವೆಂದು ಬರೆಸಿ ಎಂದು ಪಂಚಮಸಾಲಿ ಸಮಾಜದ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.

ಬೆಳಗಾವಿ ಜಿಲ್ಲೆಯ ರಾಯಭಾಗ ಪಟ್ಟಣದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿಯಲ್ಲಿ ನೀವು ಪಂಚಮಸಾಲಿಗಳೆಂದು ನಮೂದಿಸಿ ಎಂದಿದ್ದಾರೆ.

ಸಂವಿಧಾನ ಬದ್ಧವಾಗಿ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಶೈಕ್ಷಣಿಕವಾಗಿ ರಾಜ್ಯ ಸರ್ಕಾರದಿಂದ ಪ್ರವರ್ಗ 2ಎ ಮೀಸಲಾತಿ ಹಾಗೂ ಕೇಂದ್ರದಿಂದ ಓಬಿಸಿ ಮೀಸಲಾತಿ ನೀಡುವಂತೆ ಕಳೆದ ಐದು ವರ್ಷಗಳಿಂದ ಹೋರಾಟ ಮಾಡಿಕೊಂಡು ಬರಲಾಗಿದೆ. ಆದರೆ, ಕಳೆದ ಬಾರಿ ಡಿಸೆಂಬರ್ 10ರಂದು ಇವತ್ತಿನ ಸರ್ಕಾರ ಪೊಲೀಸರಿಗೆ ಕುಮ್ಮಕ್ಕು ಕೊಟ್ಟು ನಮ್ಮ ಮೇಲೆ ಮಾರಣಾಂತಿಕ ಹಲ್ಲೆ ಮಾಡಿಸಿತು. ಆ ನೋವು, ಸಂಕಟ ನಮ್ಮೊಳಗಿದೆ. ಸರ್ಕಾರ ನಮ್ಮ ಮೇಲೆ ಲಾಠಿ ಚಾರ್ಜ್ ಮಾಡಿದರೂ, ಯಾವುದೇ ಸರ್ಕಾರ ಬಂದರೂ, ಯಾವುದೇ ಮುಖ್ಯಮಂತ್ರಿ ಬಂದರೂ ನಮ್ಮ ಹೋರಾಟ ಬಿಡಬಾರದು ಎಂದು ಹೇಳಿದ್ದಾರೆ.

2028ನೆಯ ಇಸ್ವಿಗೆ ಒಂದು ನಿರ್ಧಾರಕ್ಕೆ ನಾವು ಬರಬೇಕಾಗಿದೆ. ಆ ನಿರ್ಧಾರಕ್ಕೆ ಇಡೀ ಸಮಾಜ ಒಗ್ಗಟ್ಟಾಗಿರಬೇಕು. ಪ್ರತಿ ತಾಲೂಕು, ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ಕೊಟ್ಟು ಜನರೊಂದಿಗೆ ಸಂವಾದ, ಸಂಘರ್ಷ ಮತ್ತು ಅಭಿಪ್ರಾಯ ಸಂಗ್ರಹ ಮಾಡಿಕೊಂಡು ಜನ ಏನು ತೀರ್ಮಾನ ಮಾಡುತ್ತಾರೆ ಆ ತೀರ್ಮಾನವನ್ನು ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಹೋರಾಟವನ್ನು ನಿರಂತರವಾಗಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !