ಉದ್ಯಮಿಯಿಂದ 194 ಕೋಟಿ ನಗದು, 23 ಕೆಜಿ ಚಿನ್ನ ಜಪ್ತಿ ಮಾಡಿದ ಆದಾಯ ತೆರಿಗೆ ಅಧಿಕಾರಿಗಳು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌
ಕಾನ್ಪುರದ ಉದ್ಯಮಿಯೊಬ್ಬರ ಮೇಲೆ ಆದಾಯ ತೆರಿಗೆ ಇಲಾಖೆ ತನಿಖೆ ಆರಂಭಿಸಿದ್ದು ಆತನ ಕಾರ್ಖಾನೆಯಿಂದ ಬರೋಬ್ಬರಿ 194.45 ಕೋಟಿ ರೂಪಾಯಿ ನಗದು, 23 ಕೆಜಿ ಚಿನ್ನ ಮತ್ತು 600 ಕೆಜಿ ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದೆ.

ಉತ್ತರ ಪ್ರದೇಶದ ಸುಗಂಧ ದ್ರವ್ಯ ಉದ್ಯಮಿ ಪಿಯೂಷ್ ಜೈನ್ ವಿರುದ್ಧ ಆದಾಯ ತೆರಿಗೆ ಇಲಾಖೆ ತನಿಖೆ ಕೈಗೊಂಡಿದ್ದು ವಶಪಡಿಸಿಕೊಂಡ ಹಣದಲ್ಲಿ 52 ಕೋಟಿ ತೆರಿಗೆ ಹೊಣೆಗಾರಿಕೆಯನ್ನು ಸಂಗ್ರಹಿಸಲಾಗಿದ್ದು ಉಳಿದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ಹೇಳಿರುವ ಕುರಿತು ಮೂಲಗಳು ವರದಿ ಮಾಡಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!