ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ಅಪಘಾತ ಹೆಚ್ಚಳ: ಪರಿಶೀಲನೆಗೆ ವಿಶೇಷ ಸಮಿತಿ ರಚಿಸಿದ NHAI

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು- ಮೈಸೂರು ಎಕ್ಸ್​ಪ್ರೆಸ್​ ವೇಯಲ್ಲಿ ನಿರಂತರ ಅಪಘಾತಗಳು ನಡೆಯುತ್ತಿದ್ದು, ಈ ಹಿನ್ನೆಲೆ ಎಚ್ಚೆತ್ತ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ, ವಿಶೇಷ ಸಮಿತಿಯೊಂದನ್ನು ರಚನೆ ಮಾಡಿದೆ.

ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ.ಪೊಪ್ತಿ, ಎನ್​ಹೆಚ್​​​ಎಐ ಉಪ ವ್ಯವಸ್ಥಾಪಕ ಪ್ರವೀಣ್‌ ಕುಮಾ‌ರ್, ಜೈವರ್ಧನ್‌ ಸಿಂಗ್‌ ಅವರ ಸಮಿತಿ ಇದಾಗಿದೆ.

ಈ ಸಮಿತಿಯು ಜುಲೈ 20 ರೊಳಗೆ ಎಕ್ಸ್‌ಪ್ರೆಸ್‌ ಹೈವೇಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.10 ದಿನದೊಳಗೆ ವರದಿ ನೀಡುವಂತೆ ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುನೀಲ್ ಜಿಂದಾಲ್ ಸಮಿತಿಗೆ ಸೂಚನೆ ನೀಡಿದ್ದಾರೆ.

ಕಳೆದ 9 ತಿಂಗಳಿನಲ್ಲಿ ಎಕ್ಸ್​ಪ್ರೆಸ್​ ಹೈವೇಯಲ್ಲಿ 550ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!