ಹೊಸದಿಗಂತ ಡಿಜಿಟಲ್ ಡೆಸ್ಕ್
ಭಾರತೀಯ ಕ್ರಿಕೆಟ್ನಲ್ಲಿ ಪರಿವರ್ತನೆಯ ಹಂತ ಪ್ರಾರಂಭವಾಗಿದೆ. ಶ್ರೀಲಂಕಾ ವಿರುದ್ಧದ ಸರಣಿಗೆ ಪ್ರಕಟಿಸಲಾದ ಟಿ 20 ಹಾಗೂ ಏಕದಿನ ತಂಡಗಳಲ್ಲಿ ಇದು ಸ್ಪಷ್ಟವಾಗಿ ಪ್ರಕಟವಾಗಿದೆ. ಟೀಂ ಇಂಡಿಯಾದಿಂದ ಹಿರಿಯರಿಗೆ ನಿಧಾನವಾಗಿ ಪ್ರಾತಿನಿಧ್ಯ ಕಡಿಮೆ ಮಾಡಿ ಕಿರಿಯರಿಗೆ ಹೆಚ್ಚಿನ ಅವಕಾಶ ನೀಡಲು ಮಂಡಳಿ ಮುಂದಾಗಿದೆ. ಇದಕ್ಕಾಗಿ ತಂಡದಲ್ಲಿ ಹಲವು ಬದಲಾವಣೆ ಮಾಡಲಾಗುತ್ತಿದ್ದು, ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಲಾಗಿದೆ.
ಬಿಸಿಸಿಐ ಟಿ 20 ಯಲ್ಲಿ ಪಾಂಡ್ಯ ನೇತೃತ್ವದ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇಶಾನ್ ಕಿಶನ್ ಅವರನ್ನು ವಿಕೆಟ್ ಕೀಪರ್ ಆಗಿ ಕರೆಸಿಕೊಳ್ಳಲಾಗಿದೆ. ರಿಷಬ್ ಪಂತ್ ತಂಡದ ಸದಸ್ಯನಲ್ಲ. ಶಿವಂ ಮಾವಿ, ಮುಖೇಶ್ ಕುಮಾರ್ T20I ತಂಡಕ್ಕೆ ಇಬ್ಬರು ಹೊಸ ಮುಖಗಳು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಕೆಎಲ್ ರಾಹುಲ್ ಅವರು ತಂಡದ ಭಾಗವಾಗಿಲ್ಲ. ರೋಹಿತ್ ಗಾಯಾಳುವಾಗಿದ್ದರೆ, ಕೊಹ್ಲಿ ಟಿ20 ಸರಣಿಯಿಂದ ವಿರಾಮ ಕೇಳಿದ್ದಾರೆ ಎಂದು ವರದಿಯಾಗಿದೆ ಆದರೆ ರಾಹುಲ್ ಅನುಪಸ್ಥಿತಿಯ ಬಗ್ಗೆ ನಿಖರ ಮಾಹಿತಿ ಇಲ್ಲ. ಅವರು ವಿವಾಹಕ್ಕಾಗಿ ಬ್ರೇಕ್ ಪಡೆದಿದ್ದಾರೆ ಎನ್ನಲಾಗುತ್ತಿದೆ. ರಿಷಬ್ ಪಂತ್ ತಂಡದ ಭಾಗವಾಗಿಲ್ಲದ ಕಾರಣ, ಬಿಸಿಸಿಐ ಸರಣಿಗೆ ಹೊಸ ಉಪನಾಯಕನನ್ನು ಘೋಷಿಸಿದೆ. ಸೂರ್ಯಕುಮಾರ್ ಯಾದವ್ ಅವರನ್ನು ಟಿ20 ತಂಡದ ಉಪನಾಯಕರನ್ನಾಗಿ ನೇಮಿಸಲಾಗಿದೆ.
ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ20 ಪಂದ್ಯ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಎರಡನೇ ಪಂದ್ಯ ಜನವರಿ 5 ರಂದು ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಿಗದಿಯಾಗಿದೆ. ಸರಣಿಯ ಮೂರನೇ ಮತ್ತು ಅಂತಿಮ ಪಂದ್ಯ ರಾಜ್ಕೋಟ್ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ನಡೆಯಲಿದೆ. ಅದರ ನಂತರ ಉಭಯ ತಂಡ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಸರಣಿಯನ್ನು ಆಡಲಿದ್ದಾರೆ.
ಇದಾಗ್ಯೂ ಏಕದಿನ ಸರಣಿಯಲ್ಲಿ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ, ಕೆಎಲ್ ರಾಹುಲ್ ಹಾಗೂ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಮತ್ತೊಂದು ಮಹತ್ವದ ವಿಚಾರವೆಂದರೆ ಶಿಖರ್ ಧವನ್ ಏಕದಿನ ತಂಡದಿಂದ ಹೊರಬಿದ್ದಿದ್ದಾರೆ. ಇನ್ನು ಎರಡೂ ತಂಡದಲ್ಲೂ ಟೀಮ್ ಇಂಡಿಯಾ ವಿಕೆಟ್ ಕೀಪರ್ ರಿಷಭ್ ಪಂತ್ ಗೆ ಸ್ಥಾನ ನೀಡಲಾಗಿಲ್ಲ.
ಭಾರತ ಟಿ20 ತಂಡ:
ಹಾರ್ದಿಕ್ ಪಾಂಡ್ಯ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್ (ಉಪನಾಯಕ), ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್.
ಭಾರತ ಏಕದಿನ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.