ಹೊಸದಿಗಂತ ಡಿಜಿಟಲ್ ಡೆಸ್ಕ್:
ಈಗಾಗಲೇ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಎರಡು ಟಿ20 ಪಂದ್ಯಗಳನ್ನು ಗೆದ್ದಿರುವ ಭಾರತ ಇಂದು ಸರಣಿ ವಶಪಡಿಸಿಕೊಳ್ಳಲು ಸಜ್ಜಾಗುತ್ತಿದೆ.
ಇಂದು ಭಾರತ- ವೆಸ್ಟ್ ಇಂಡೀಸ್ ನಡುವಿನ ಅಂತಿಮ ಹಾಗೂ ಮೂರನೇ ಏಕದಿನ ಪದ್ಯವಾಗಿದ್ದು, ವೆಸ್ಟ್ ಇಂಡೀಸ್ ಅನ್ನು ಕ್ಲೀನ್ ಸ್ವೀಪ್ ಮಾಡವತ್ತ ಟೀಂ ಇಂಡಿಯಾ ಪ್ಲಾನ್ ಮಾಡಿದೆ.
ಕೊಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯಗಳಲ್ಲಿ ಭಾರತ ಭರ್ಜರಿ ಎರಡು ಗೆಲುವು ದಾಖಲಿಸಿದೆ. ಈಗಾಗಲೇ ಶುಕ್ರವಾರ ನಡೆದ ಪಂದ್ಯದಲ್ಲಿ ಭಾರತ 8 ರನ್ ಗಳಿಂದ ರೋಚಕ ಗೆಲುವು ದಾಧಿಸಿದ್ದು, ಅಭಿಮಾನಿಗಳಿಂದ ಮೆಚ್ಚುಗೆ ಪಡೆದಿದೆ.
ಇನ್ನು ಇಂದು ನಡೆಯಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಹಾಗೂ ಫೆ.24ರಿಂದ ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ ಸರಣಿಗೆ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ರಿಷಭ್ ಪಂತ್ ಭಾಗಿಯಾಗುವುದಿಲ್ಲ. ಇವರಿಬ್ಬರಿಗೂ ಬಿಸಿಸಿಐ ಬಯೋ ಬಬಲ್ ನೀಡಿದ್ದು, ವಿಶ್ರಾಂತಿ ಪಡೆಯಲು ಸೂಚಿಸಿದೆ.