ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದ ಆನಂದಪುರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಹಿಳೆಯೊಬ್ಬರು ಅಸಭ್ಯವಾಗಿ ನೃತ್ಯ ಮಾಡಿ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಭಾನುವಾರ ಸಂಜೆ ಕನ್ನಡ ರಕ್ಷಣಾ ವೇದಿಕೆ ಅಪ್ಪು ಸೇನೆ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆರ್ಕೆಸ್ಟ್ರಾದಲ್ಲಿ ಮಹಿಳೆಯೊಬ್ಬರು ನೃತ್ಯ ಮಾಡವ ವೇಳೆ ಅಶ್ಲೀಲವಾಗಿ ವರ್ತಿಸಿದ್ದಾರೆ.
ವೇದಿಕೆ ಮೇಲೆ ನಿಂತಿದ್ದ ಬಾಲಕನ ಜೊತೆ ಅಸಭ್ಯವಾಗಿ ವರ್ತಿಸಿದ್ದು, ನೂರಾರು ಜನ ಇದನ್ನು ನೋಡುತ್ತಾ ನಿಂತಿದ್ದಾರೆ. ಈ ರೀತಿ ನೃತ್ಯ ಆರಂಭವಾಗುತ್ತಿದ್ದಂತೆಯೇ ಜನರು ಜಾಗ ಖಾಲಿ ಮಾಡಿದ್ದಾರೆ. ಕಾರ್ಯಕ್ರಮ ಆಯೋಜಕರ ಬಗ್ಗೆ ಸಾರ್ವಜನಿಕರು ದೂರಿದ್ದಾರೆ.
ರಾಜ್ಯೋತ್ಸವ ಹೆಸರಿನಲ್ಲಿ ಈ ರೀತಿ ಅಸಭ್ಯ ವರ್ತನೆ ತೋರುವ ನೃತ್ಯ ಮಾಡಬಾರದಿತ್ತು. ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.